September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ನಾಲ್ಕನೇ ದಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದಲ್ಲಿ ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ ಕಾರ್ಯಕ್ರಮವು ಸೆ.12 ರಂದು ಜರುಗಿತು.

ಮುಖ್ಯ ಅತಿಥಿಯಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೌತಡ್ಕದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜ್ಯೋತಿ ಹೆಬ್ಬಾರ್ ಪ್ರಾಸ್ತಾವಿಕ ಮಾತುಗಳನ್ನು ನುಡಿದರು. ವಿಜೇತ ಮಕ್ಕಳಾದ ವಿಸ್ಮಿತ, ಹೃತಿಕ್, ಶಾರ್ವರಿ, ನಿಧಾ ಫಾತಿಮಾ, ಸುಶ್ಮಿತಾ, ದೃತಿ, ಶಶಾಂಕ್, ಹೇಮಂತ್, ಪಿ ಲಾಸ್ಯ, ಹನ್ವಿಶ್, ನಾಡಗೀತೆ ರಾಷ್ಟ್ರಗೀತೆ ಬರವಣಿಗೆಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಜೆ ಸಿ ರಾಜಾರಾಮ ಅವರು ಗೀತೆಯನ್ನು ಮಕ್ಕಳಿಗೆ ಹೇಳಿ ಮನರಂಜನೆಗೊಳಿಸಿದರು. ಈ ಸಂದರ್ಭದಲ್ಲಿ ಘಟಕದ ಮಾರ್ಗದರ್ಶಕ ಜೋಸೆಫ್ ಪಿರೇರ, ಜೆಸ್ಸಿಂತ ಡಿಸೋಜ, ನಿಕಟ ಪೂರ್ವ ಅಧ್ಯಕ್ಷರಾದ ಜಿತೇಶ್ ಎಲ್ ಪಿರೇರ, ಯೋಜನೆ ನಿರ್ದೇಶಕರು ಕೆ ಶ್ರೀಧರ್ ರಾವ್, ಶಾಲಾ ಶಿಕ್ಷಕಿಯರಾದ ಶ್ರೀಮತಿ ಕಾಂತಿ , ಪುಷ್ಪ , ಉಪಸ್ಥಿತರಿದ್ದರು.

ಕಾರ್ಯಕ್ರಮದ ಜೆಸಿವಾಣಿ ಧನುಷ್ ಜೈನ್ ವಾಚಿಸಿದರು, ಜೆಸಿಐ ನ ಅಧ್ಯಕ್ಷರು ಸಂತೋಷ್ ಜೈನ್ ಸಾಗತಿಸಿ, ಕಾರ್ಯದರ್ಶಿ ಅಕ್ಷತ್ ರೈ ಧನ್ಯವಾದವಿತ್ತರು.

Related posts

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya
error: Content is protected !!