23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

ಬೆಳ್ತಂಗಡಿ: ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇದರ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಬಳಂಜ ಶಾಲೆಯು ಪ್ರಾರಂಭವಾಗಿ 75 ವರ್ಷಗಳನ್ನು ಪೂರೈಸುತ್ತಿದ್ದು, ಬಳಂಜ, ನಾಲ್ಕೂರು, ತೆಂಕಕಾರಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಅತೀ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, 75 ವರ್ಷ ಪೂರೈಸುತ್ತಿರುವ ಈ ಪರ್ವಕಾಲದಲ್ಲಿ ಈ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಹಾಗೂ ಕೊಠಡಿಗಳ ನಿರ್ಮಾಣ ಅವಶ್ಯವಾಗಿರುತ್ತದೆ.

ಶಾಲೆಯ ಹಿತೈಷಿಗಳು,ಹಳೆ ವಿಧ್ಯಾರ್ಥಿಗಳು ಸೇರಿಕೊಂಡು ಶಾಲೆಯ ಅಮೃತ ಮಹೋತ್ಸವವನ್ನು ಪ್ರೇರಣಾದಾಯಕವಾಗಿ ನೆರವೇರಿಸಲು ಬಳೆಂಜ ಶಿಕ್ಷಣ ಟ್ರಸ್ಟ್ ರಚಿಸಿ ದಾನಿಗಳ ಸಹಕಾರವನ್ನು ಬಳಸಿಕೊಂಡು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಸರ್ಕಾರದ ಶಿಕ್ಷಣ ಇಲಾಖೆಯ ಮೂಲಕ ತಾವುಗಳು ಶಾಲೆ ಅಭಿವೃದ್ಧಿ ಪಡಿಸಲು ರೂ. 2.00 ಕೋಟಿಗಳ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರದ ಮೂಲಕ ತಿಳಿಸಲಾಗಿದೆ.

Related posts

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya
error: Content is protected !!