September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

ಬೆಳ್ತಂಗಡಿ: ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇದರ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಬಳಂಜ ಶಾಲೆಯು ಪ್ರಾರಂಭವಾಗಿ 75 ವರ್ಷಗಳನ್ನು ಪೂರೈಸುತ್ತಿದ್ದು, ಬಳಂಜ, ನಾಲ್ಕೂರು, ತೆಂಕಕಾರಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಅತೀ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, 75 ವರ್ಷ ಪೂರೈಸುತ್ತಿರುವ ಈ ಪರ್ವಕಾಲದಲ್ಲಿ ಈ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಹಾಗೂ ಕೊಠಡಿಗಳ ನಿರ್ಮಾಣ ಅವಶ್ಯವಾಗಿರುತ್ತದೆ.

ಶಾಲೆಯ ಹಿತೈಷಿಗಳು,ಹಳೆ ವಿಧ್ಯಾರ್ಥಿಗಳು ಸೇರಿಕೊಂಡು ಶಾಲೆಯ ಅಮೃತ ಮಹೋತ್ಸವವನ್ನು ಪ್ರೇರಣಾದಾಯಕವಾಗಿ ನೆರವೇರಿಸಲು ಬಳೆಂಜ ಶಿಕ್ಷಣ ಟ್ರಸ್ಟ್ ರಚಿಸಿ ದಾನಿಗಳ ಸಹಕಾರವನ್ನು ಬಳಸಿಕೊಂಡು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಸರ್ಕಾರದ ಶಿಕ್ಷಣ ಇಲಾಖೆಯ ಮೂಲಕ ತಾವುಗಳು ಶಾಲೆ ಅಭಿವೃದ್ಧಿ ಪಡಿಸಲು ರೂ. 2.00 ಕೋಟಿಗಳ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರದ ಮೂಲಕ ತಿಳಿಸಲಾಗಿದೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!