July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

ಬೆಳ್ತಂಗಡಿ: ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಇದರ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶಿಕ್ಷಣ ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಬಳಂಜ ಶಾಲೆಯು ಪ್ರಾರಂಭವಾಗಿ 75 ವರ್ಷಗಳನ್ನು ಪೂರೈಸುತ್ತಿದ್ದು, ಬಳಂಜ, ನಾಲ್ಕೂರು, ತೆಂಕಕಾರಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಅತೀ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, 75 ವರ್ಷ ಪೂರೈಸುತ್ತಿರುವ ಈ ಪರ್ವಕಾಲದಲ್ಲಿ ಈ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಹಾಗೂ ಕೊಠಡಿಗಳ ನಿರ್ಮಾಣ ಅವಶ್ಯವಾಗಿರುತ್ತದೆ.

ಶಾಲೆಯ ಹಿತೈಷಿಗಳು,ಹಳೆ ವಿಧ್ಯಾರ್ಥಿಗಳು ಸೇರಿಕೊಂಡು ಶಾಲೆಯ ಅಮೃತ ಮಹೋತ್ಸವವನ್ನು ಪ್ರೇರಣಾದಾಯಕವಾಗಿ ನೆರವೇರಿಸಲು ಬಳೆಂಜ ಶಿಕ್ಷಣ ಟ್ರಸ್ಟ್ ರಚಿಸಿ ದಾನಿಗಳ ಸಹಕಾರವನ್ನು ಬಳಸಿಕೊಂಡು ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಸರ್ಕಾರದ ಶಿಕ್ಷಣ ಇಲಾಖೆಯ ಮೂಲಕ ತಾವುಗಳು ಶಾಲೆ ಅಭಿವೃದ್ಧಿ ಪಡಿಸಲು ರೂ. 2.00 ಕೋಟಿಗಳ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರದ ಮೂಲಕ ತಿಳಿಸಲಾಗಿದೆ.

Related posts

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಸಚಿವರಾಗಿ ಆಯ್ಕೆಯಾದ ಯುಟಿ ಖಾದರ್ ರವರಿಗೆ ಗೆಜ್ಜೆಗಿರಿಯ ಸಮಿತಿಯಿಂದ ಅಭಿನಂದನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya
error: Content is protected !!