38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24 ನೇ ಸಾಲಿನ ಮಹಾಸಭೆಯು  ಸೆ.14 ರಂದು ಸಂಘದ ಜ್ಯೇಷ್ಠ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ, ಶ್ರೀ ನಾರಾಯಣ ರಾವ್. ಯಂ ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2023-24ರ ಸಾಲಿನಲ್ಲಿ ರೂ.129 ಕೋಟಿ ವ್ಯವಹಾರ ನಡೆಸಿ, ರೂ.64,30,585 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಡ್ ನೀಡುವುದಾಗಿ ಘೋಷಿಸಿದರು. ರೈತರಿಗೆ ಅನುಕೂಲವಾಗುವ ಹಾಗೆ ಮುಂದಿನ ದಿನಗಳಲ್ಲಿ ರಸ ಗೊಬ್ಬರದ ಬಗ್ಗೆ ತೀರ್ಮಾನಿಸಲಾಗುವುದು ಎಂದರು

2024 ರ ಮೇ ತಿಂಗಳ CA ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಂಘದ ಸದಸ್ಯರ ಮಕ್ಕಳಾದ CA ಸುಕನ್ಯಾ ವಿ ಕಾಮತ್,CA ಮೇಘೇಶ್ ಯು . ಶೆಟ್ಟಿ ರವರನ್ನು ಸನ್ಮಾನಿಸಲಾಯಿತು ಅತೀ ಹೆಚ್ಚು ಪಿಗ್ಮಿ ಸಂಗ್ರಹಣೆ ಮಾಡಿದ ಆನಂದ ಕೋಟ್ಯಾನ್ ರವರನ್ನು ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ ರಾದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್ ವಾರ್ಷಿಕ ವರದಿ ಮಂಡಿಸಿದರು.  ಸಂಘದ ಉಪಾಧ್ಯಕ್ಷರಾದ ಶ್ರೀ ವಡಿವೇಲು ನಿರ್ದೇಶಕರುಗಳಾದ ಭಗೀರಥ. ಜಿ  ಸುಜಿತಾ ವಿ ಬಂಗೇರ,ಸಚಿನ್ ಕುಮಾರ್ ನೂಜೋಡಿ,  ನಾರಾಯಣ ಪೂಜಾರಿ , ಜಯಂತಿ , ಅರುಣ್ ಕುಮಾರ್ , ಪುರಂದರ ಶೆಟ್ಟಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಅನಂತ ರಾಜ್ ಜೈನ್,,ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್, ಸಂಘದ ಸದಸ್ಯರು ಮತ್ತು ಸಿಬ್ಬಂದಿಗಳು ಸಭೆಯಲ್ಲಿ  ಉಪಸ್ಥಿತರಿದ್ದರು. ನಿರ್ದೇಶಕರಾದ ಸಚಿನ್ ಕುಮಾರ್ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya
error: Content is protected !!