24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2023-24 ನೇ ಸಾಲಿನ ಮಹಾಸಭೆಯು  ಸೆ.14 ರಂದು ಸಂಘದ ಜ್ಯೇಷ್ಠ ಸಭಾಭವನದಲ್ಲಿ ಜರುಗಿತು.

ಸಂಘದ ಅಧ್ಯಕ್ಷರಾದ, ಶ್ರೀ ನಾರಾಯಣ ರಾವ್. ಯಂ ರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು 2023-24ರ ಸಾಲಿನಲ್ಲಿ ರೂ.129 ಕೋಟಿ ವ್ಯವಹಾರ ನಡೆಸಿ, ರೂ.64,30,585 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಡಿವಿಡೆಂಡ್ ನೀಡುವುದಾಗಿ ಘೋಷಿಸಿದರು. ರೈತರಿಗೆ ಅನುಕೂಲವಾಗುವ ಹಾಗೆ ಮುಂದಿನ ದಿನಗಳಲ್ಲಿ ರಸ ಗೊಬ್ಬರದ ಬಗ್ಗೆ ತೀರ್ಮಾನಿಸಲಾಗುವುದು ಎಂದರು

2024 ರ ಮೇ ತಿಂಗಳ CA ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಂಘದ ಸದಸ್ಯರ ಮಕ್ಕಳಾದ CA ಸುಕನ್ಯಾ ವಿ ಕಾಮತ್,CA ಮೇಘೇಶ್ ಯು . ಶೆಟ್ಟಿ ರವರನ್ನು ಸನ್ಮಾನಿಸಲಾಯಿತು ಅತೀ ಹೆಚ್ಚು ಪಿಗ್ಮಿ ಸಂಗ್ರಹಣೆ ಮಾಡಿದ ಆನಂದ ಕೋಟ್ಯಾನ್ ರವರನ್ನು ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ ರಾದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಎನ್ ವಾರ್ಷಿಕ ವರದಿ ಮಂಡಿಸಿದರು.  ಸಂಘದ ಉಪಾಧ್ಯಕ್ಷರಾದ ಶ್ರೀ ವಡಿವೇಲು ನಿರ್ದೇಶಕರುಗಳಾದ ಭಗೀರಥ. ಜಿ  ಸುಜಿತಾ ವಿ ಬಂಗೇರ,ಸಚಿನ್ ಕುಮಾರ್ ನೂಜೋಡಿ,  ನಾರಾಯಣ ಪೂಜಾರಿ , ಜಯಂತಿ , ಅರುಣ್ ಕುಮಾರ್ , ಪುರಂದರ ಶೆಟ್ಟಿ, ಮೋಹನ್ ನಾಯ್ಕ, ಶಶಿರಾಜ್ ಶೆಟ್ಟಿ, ಅನಂತ ರಾಜ್ ಜೈನ್,,ಡಿ.ಸಿ.ಸಿ. ಪ್ರತಿನಿಧಿ ಸಿರಾಜುದ್ದೀನ್, ಸಂಘದ ಸದಸ್ಯರು ಮತ್ತು ಸಿಬ್ಬಂದಿಗಳು ಸಭೆಯಲ್ಲಿ  ಉಪಸ್ಥಿತರಿದ್ದರು. ನಿರ್ದೇಶಕರಾದ ಸಚಿನ್ ಕುಮಾರ್ ಧನ್ಯವಾದವಿತ್ತರು.

Related posts

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
error: Content is protected !!