ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಬಳಂಜ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿ ಸಭಾಭವನದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ, ದೇವಸ್ಥಾನ ಕಟೀಲು ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ಸಾಹಿತಿಗಳ ಏಳನೇ ಸಮ್ಮೇಳನ ಕಾರ್ಯಕ್ರಮದಲ್ಲಿ ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ರವೀಂದ್ರ ಶೆಟ್ಟಿಯವರು ಸಲ್ಲಿಸಿದ ಅಮೂಲ್ಯ ಸೇವೆಯೊಂದಿಗೆ, ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಶೈಕ್ಷಣಿಕ ಕಾಳಜಿ, ಜನಪರ ಚಿಂತನೆಗಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಈ ಪ್ರಶಸ್ತಿ ನೀಡಿ ಗೌರವಿಸಿದೆ.

Leave a Comment

error: Content is protected !!