25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

ಉಪ್ಪಿನಂಗಡಿ: ತಪ್ಪು ಮಾಡಿದ್ದಾನೆ ಎಂದು ಇಂಗ್ಲಿಷ್ ಭಾಷೆ ಬೋಧಿಸುವ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮೂರು ದಿನಗಳಿಂದ ಬೆತ್ತದಿಂದ ಹೊಡೆದಿದ್ದು, ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರೋಪಿ ಶಿಕ್ಷಕನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಉರುವಾಲು ನಿವಾಸಿಯಾಗಿದ್ದು, ಪದ್ಮುಂಜ ಸರಕಾರಿ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿ. ಇಂಗ್ಲಿಷ್ ಭಾಷಾ ಶಿಕ್ಷಕ ಈ ವಿದ್ಯಾರ್ಥಿಗೆ ಸೆ.೯, ೧೦, ೧೧ರಂದು ಬೆತ್ತದಿಂದ ಹೊಡೆದಿದ್ದು, ಈ ವಿಚಾರವನ್ನು ವಿದ್ಯಾರ್ಥಿ ಯಾರಿಗೂ ತಿಳಿಸದೆ ಸುಮ್ಮನಿದ್ದ. ಬಳಿಕ ನೋವು ಜಾಸ್ತಿಯಾದ ಕಾರಣ ಮನೆಯವರಿಗೆ ವಿಚಾರ ತಿಳಿಸಿದ್ದ. ಮನೆಯವರು ವಿಚಾರಿಸಿದಾಗ ವಿದ್ಯಾರ್ಥಿ ನಡೆದ ಘಟನೆಯನ್ನು ತಿಳಿಸಿದ್ದು, ಬಳಿಕ ಮನೆಯವರು ವಿದ್ಯಾರ್ಥಿಯನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ.

Related posts

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!