24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

ಮುಂಡಾಜೆ:ವರದಿ ವರ್ಷದಲ್ಲಿ ಸಂಘವು 623 ಕೋಟಿ ರೂ.ಗಿಂತ ಅಧಿಕ ವ್ಯವಹಾರ ನಡೆಸಿದ್ದು 2 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ. ಸದಸ್ಯರಿಗೆ 15 ಶೇ.ದಂತೆ ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನೂಜಿ ಜನಾರ್ದನ ಗೌಡ ಹೇಳಿದರು.

ಮುಂಡಾಜೆಯ ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಭಾರ್ಗವ ಸಭಾಭವನದಲ್ಲಿ ಶನಿವಾರ ಜರಗಿದ ಸಂಘದ ಮಹಾಸಭೆಯಲ್ಲಿ ಮಾತನಾಡಿದ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ವರದಿ ವರ್ಷದಲ್ಲಿ 6,023 ಎ ತರಗತಿ ಸದಸ್ಯರು, 8,321 ಸಿ ಮತ್ತು ಡಿ ವರ್ಗದ ಸದಸ್ಯರಿದ್ದು 7.21ಕೋಟಿ ರೂ. ಪಾಲು ಬಂಡವಾಳ ಹೊಂದಿದೆ. 72 ಕೋಟಿ ರೂ.ಗಿಂತ ಅಧಿಕ ಠೇವಣಿ ಸಂಗ್ರಹವಿದ್ದು 100 ಕೋಟಿ ರೂ.ಗಿಂತ ಅಧಿಕರು ಸಾಲವನ್ನು ಸದಸ್ಯರಿಗೆ ವಿತರಿಸಲಾಗಿದೆ.

ಸವಿವರವಾದ ಲೆಕ್ಕಪತ್ರ ನೀಡಿದ ಕುರಿತು ಸದಸ್ಯರಾದ ವೆಂಕಟೇಶ್ವರ ಭಟ್, ನಾಮದೇವ ರಾವ್, ರೆಹಮಾನ್, ಬಾಬು ಪೂಜಾರಿ ಮತ್ತಿತರರು ಪ್ರಸ್ತಾವಿಸಿದರು.

ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಪ್ರಕಾಶ ನಾರಾಯಣ ಸ್ವಾಗತಿಸಿದರು. ಶಾಖಾ ಪ್ರಬಂಧಕ ಪ್ರಸನ್ನ ಪರಾಂಜಪೆ, ಆಂತರಿಕ ಲೆಕ್ಕಪರಿಶೋಧಕ ನಾರಾಯಣ ಫಡಕೆ ಕಾರ್ಯಕ್ರಮ ನಿರೂಪಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಚಂದ್ರಕಾಂತ ಪ್ರಭು, ನಿರ್ದೇಶಕರಾದ ಕೊರಗಪ್ಪ ನಾಯ್ಕ,ಜ್ಯೋತಿ ಜೆ ಫಡ್ಕೆ,ಸುಮಾ ಎಂ ಗೋಖಲೆ,ಎಂ.ಶಶಿಧರ ಕಲ್ಮಂಜ, ರಾಘವ ಕಲ್ಮಂಜ, ನಂದ ಕುಮಾರ್,ಸಂಜೀವ ಗೌಡ ಮಾರ್ಕಳ,ಶಶಿಧರ,ಶಶಿಧರ ಬಿ,ನಯನ,ಗಜಾನನ ವಝೆ ಉಪಸ್ಥಿತರಿದ್ದರು

Related posts

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!