ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶ್ರೀ ಧ. ಮಂ‌. ಅನುದಾನಿತ ಪ್ರೌಢ ಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿಗಳು ಉಜಿರೆ ಅನುಗ್ರಹ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಗಳಿಸಿದ್ದಾರೆ.

ಹಿಂದಿ ಭಾಷಣದಲ್ಲಿ ಸೃಷ್ಟಿ 9ನೇ ತರಗತಿ ಪ್ರಥಮ, ತುಳು ಭಾಷಣದಲ್ಲಿ ರಕ್ಷಾ 9ನೇ ತರಗತಿ ಪ್ರಥಮ, ಗಝಲ್ ಸ್ಪರ್ಧೆಯಲ್ಲಿ ಐಶ್ವರ್ಯ ಎಂಟನೇ ತರಗತಿ ಪ್ರಥಮ, ಪ್ರಬಂಧ ಸ್ಪರ್ಧೆಯಲ್ಲಿ ಇಂದುಮತಿ ಹತ್ತನೇ ತರಗತಿ ದ್ವಿತೀಯ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಲೋಕೇಶ್ ಹತ್ತನೇ ತರಗತಿ ಮತ್ತು ಅಂಕಿತಾ 9ನೇ ತರಗತಿ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತರನ್ನು ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಹಾಗೂ ಶಿಕ್ಷಕರು ಅಭಿನಂದಿಸಿದರು.

Leave a Comment

error: Content is protected !!