23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ : ಸೆ 15 ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಆಟೋಟ ಸ್ಪರ್ಧೆ, ಶ್ರೀ ಕುರಾಯ ಸದಾಶಿವ ಮಕ್ಕಳ ಭಜನಾ ತಂಡದಿಂದ ನೃತ್ಯ ಭಜನೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕರಾದ ರವಿ ಭೀಮ್ ಭಟ್ ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು , ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರು, ಪ್ರಗತಿಪರ ಕೃಷಿಕರಾದ ಚಂದಪ್ಪ ಪೂಜಾರಿ ಮಲ್ಲಕಂಬ ಸ್ಪರ್ಧೆಗೆ ಚಾಲನೆ ನೀಡಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಉಪಸ್ಥಿತರಿದ್ದರು.
ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಯುವಕ ಮಂಡಲ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ-ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya
error: Content is protected !!