22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

ಬೆಳ್ತಂಗಡಿ : ಸೆ.14. ಆರೋಗ್ಯವಂತ ಜೀವನಕ್ಕೆ ಪೌಷ್ಟಿಕಾಂಶ ಆಹಾರ ಅಗತ್ಯವಿದೆ.
ಮಾನಸಿಕವಾಗಿ, ಭೌತಿಕವಾಗಿ ಪೋಷಕಾಂಶಗಳ ಕೊರತೆಯನ್ನು ನೀಗಿಸಲು ಗರ್ಭಿಣಿ ಬಾಣಂತಿ ಮಹಿಳೆಯರು ಹಾಗೂ ಮಕ್ಕಳು ಹಿತ,ಮಿತ ಆಹಾರ ಜೊತೆಗೆ ಪೌಷ್ಟಿಕ ಆಹಾರ ಸೇವನೆಯಿಂದ ಪರಿಪೂರ್ಣ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬ್ಯಾಂಕ್ ನಿವೃತ್ತ ಅಧಿಕಾರಿ ಬನಶಂಕರಿ ವೆಂಕಟೇಶ್ವರ ಭಟ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸ್ತ್ರೀ ಶಕ್ತಿ ಸ್ವಸಹಾಯ ಸಂಘ ನಾಳ,ಅಂಗನವಾಡಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು, ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿದ 20 ಕ್ಕೂ ಹೆಚ್ಚಿನ ವಿವಿಧ ಬಗೆಯ ತಿಂಡಿ, ತಿನಿಸುಗಳನ್ನು ಪ್ರದರ್ಶನ ಮತ್ತು ಸಾಮೂಹಿಕ ವಿತರಣೆ ಜರುಗಿತು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಮೋಹಿನಿ,ಪುಷ್ಪ, ಕಳಿಯ ಸಿ.ಎ.ಬ್ಯಾಂಕ್ ನಿರ್ದೇಶಕಿ ಮಮತ ವಿ.ಆಳ್ವ, ಸ್ಥಳೀಯರಾದ ಸೌಭಾಗ್ಯ ರಾಜೇಶ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸನ್ಮಾನ:
ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಣಿಯೂರು ವಲಯದ ಮೇಲ್ವಿಚಾರಕಿ ನಂದನ ಶೆಟ್ಟಿಯವರು ಪುತ್ತೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ವರ್ಗಾವಣೆ ಹೊಂದಿದ್ದಾರೆ. ಕಣಿಯೂರು ವಲಯದ ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯವರ ವತಿಯಿಂದ ಸನ್ಮಾನಿಸಿ,ಗೌರವಿಸಿದರು.
ಈ ಸಂದರ್ಭದಲ್ಲಿ ಕಣಿಯೂರು ವಲಯದ ಅಂಗನವಾಡಿ
ಕಾರ್ಯಕರ್ತೆಯರು,ಸಹಾಯಕಿಯರು,ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು,ಆಶಾ ಕಾರ್ಯಕರ್ತೆಯರು ಭಾಗವಹಿಸಿದರು.
ನಾಳ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿದರು. ರಕ್ತೇಶ್ವರಿ ಪದವು ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್.ವಂದಿಸಿದರು.

Related posts

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!