27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ : ಸೆ 15 ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಆಟೋಟ ಸ್ಪರ್ಧೆ, ಶ್ರೀ ಕುರಾಯ ಸದಾಶಿವ ಮಕ್ಕಳ ಭಜನಾ ತಂಡದಿಂದ ನೃತ್ಯ ಭಜನೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕರಾದ ರವಿ ಭೀಮ್ ಭಟ್ ರವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು , ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರು, ಪ್ರಗತಿಪರ ಕೃಷಿಕರಾದ ಚಂದಪ್ಪ ಪೂಜಾರಿ ಮಲ್ಲಕಂಬ ಸ್ಪರ್ಧೆಗೆ ಚಾಲನೆ ನೀಡಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಉಪಸ್ಥಿತರಿದ್ದರು.
ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಯುವಕ ಮಂಡಲ ಅಧ್ಯಕ್ಷರು, ಕಾರ್ಯದರ್ಶಿ ಪದಾಧಿಕಾರಿಗಳು ಸರ್ವ-ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಬಳಂಜ ಶಾಲಾ ಪ್ರಾರಂಭೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!