September 6, 2026
Uncategorized

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

ಬೆಳ್ತಂಗಡಿ : ದೇಶದ ಬಹಳಷ್ಟು ಜನರು ಮಾತನಾಡುವ ಹಿಂದಿ ಭಾಷೆ ಒಂದು ಶ್ರೀಮಂತ ಭಾಷೆಯಾಗಿದೆ ಎಂದು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಯೋಗಿನಿ ಹೇಳಿದರು.
ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ ಕುರಿತು ಮಾತನಾಡುತ್ತ, ಹಿಂದಿ ಭಾಷೆ ಭಾರತದ ವಿವಿಧ ರಾಜ್ಯಗಳ ಮತ್ತು ಪ್ರದೇಶಗಳ ನಡುವೆ ಉತ್ತಮ ಸಂವಹನವನ್ನು ಮಾಡುವ ಶಕ್ತಿಯಾಗಿದೆ. ರಾಷ್ಟ್ರೀಯ ಎಲ್ಲಾ ವಿಚಾರಗಳನ್ನು ತಿಳಿಯಲು ಅಥವಾ ವ್ಯವಹರಿಸಲು ಹಿಂದಿ ಭಾಷೆ ಉತ್ತಮ ಮಾಧ್ಯಮವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಉಪನ್ಯಾಸಕಿ ಶ್ರೀಮತಿ ರಮ್ಯಾ ಜೋಶಿ ಸ್ವಾಗತಿಸಿದರು. ದಿವಿಜ್ ಧನ್ಯವಾದವಿತ್ತರು.
ಡೆಲಿಷಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!