30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಇವರ ಅಧ್ಯಕ್ಷತೆಯಲ್ಲಿ ಸೆ.15ರಂದು ಗುರುವಾಯನಕೆರೆ ಬಂಟರಭವನದಲ್ಲಿ ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.721 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.2.50 ಕೋಟಿ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಸದಸ್ಯರಿಗೆ ಶೇ.18 ಡಿವಿಡೆಂಟ್ ಘೋಷಿಸಿದರು.

ನಿರ್ದೇಶಕರಾದ ಬಿ. ಸೀತಾರಾಮ ಶೆಟ್ಟಿ ಮಂಗಳೂರು, ಬಾಲಕೃಷ್ಣ ಪೂಂಜ ಮದ್ದಡ್ಕ, ನಾರಾಯಣ ಶೆಟ್ಟಿ ಕುಂಟಿನಿ, ಕೃಷ್ಣ ರೈ ಟಿ. ಸಬರಬೈಲು, ರಘುರಾಮ ಶೆಟ್ಟಿ “ಸಾಧನಾ” ಉಜಿರೆ, ಶ್ರೀಮತಿ ಅಂಬಾ ಬಿ. ಆಳ್ವ ಶ್ರೀರಕ್ಷಾ ನಾಳ, ಪುರಂದರ ಶೆಟ್ಟಿ ಪಾಡ್ಯಾರ್, ಜಯರಾಮ ಭಂಡಾರಿ ಎಂ. ಧರ್ಮಸ್ಥಳ, ಶ್ರೀಮತಿ ಸಾರಿಕಾ ಶೆಟ್ಟಿ ಧರ್ಮಸ್ಥಳ ಹಾಗೂ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರೂಪಿಸಿದರು. ಸಿಬ್ಬಂದಿಗಳಾದ ರಂಜನ್ ಹಾಗೂ ಶ್ರೀಮತಿ ಸವಿತಾ ಪ್ರಾರ್ಥಿಸಿದರು. ನಿರ್ದೇಶಕರಾದ ರಘುರಾಮ ಶೆಟ್ಟಿ ಸ್ವಾಗತಿಸಿ, ಜಯಂತ್ ಶೆಟ್ಟಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya
error: Content is protected !!