22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಇವರ ಅಧ್ಯಕ್ಷತೆಯಲ್ಲಿ ಸೆ.15ರಂದು ಗುರುವಾಯನಕೆರೆ ಬಂಟರಭವನದಲ್ಲಿ ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.721 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.2.50 ಕೋಟಿ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಸದಸ್ಯರಿಗೆ ಶೇ.18 ಡಿವಿಡೆಂಟ್ ಘೋಷಿಸಿದರು.

ನಿರ್ದೇಶಕರಾದ ಬಿ. ಸೀತಾರಾಮ ಶೆಟ್ಟಿ ಮಂಗಳೂರು, ಬಾಲಕೃಷ್ಣ ಪೂಂಜ ಮದ್ದಡ್ಕ, ನಾರಾಯಣ ಶೆಟ್ಟಿ ಕುಂಟಿನಿ, ಕೃಷ್ಣ ರೈ ಟಿ. ಸಬರಬೈಲು, ರಘುರಾಮ ಶೆಟ್ಟಿ “ಸಾಧನಾ” ಉಜಿರೆ, ಶ್ರೀಮತಿ ಅಂಬಾ ಬಿ. ಆಳ್ವ ಶ್ರೀರಕ್ಷಾ ನಾಳ, ಪುರಂದರ ಶೆಟ್ಟಿ ಪಾಡ್ಯಾರ್, ಜಯರಾಮ ಭಂಡಾರಿ ಎಂ. ಧರ್ಮಸ್ಥಳ, ಶ್ರೀಮತಿ ಸಾರಿಕಾ ಶೆಟ್ಟಿ ಧರ್ಮಸ್ಥಳ ಹಾಗೂ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರೂಪಿಸಿದರು. ಸಿಬ್ಬಂದಿಗಳಾದ ರಂಜನ್ ಹಾಗೂ ಶ್ರೀಮತಿ ಸವಿತಾ ಪ್ರಾರ್ಥಿಸಿದರು. ನಿರ್ದೇಶಕರಾದ ರಘುರಾಮ ಶೆಟ್ಟಿ ಸ್ವಾಗತಿಸಿ, ಜಯಂತ್ ಶೆಟ್ಟಿ ಧನ್ಯವಾದವಿತ್ತರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya
error: Content is protected !!