25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಇವರ ಅಧ್ಯಕ್ಷತೆಯಲ್ಲಿ ಸೆ.15ರಂದು ಗುರುವಾಯನಕೆರೆ ಬಂಟರಭವನದಲ್ಲಿ ನಡೆಯಿತು.

ಸಂಘವು ವರದಿ‌ ಸಾಲಿನಲ್ಲಿ ರೂ.721 ಕೋಟಿ ವಾರ್ಷಿಕ ವ್ಯವಹಾರ ನಡೆಸಿ,ರೂ.2.50 ಕೋಟಿ ನಿವ್ವಳ ಲಾಭ ಗಳಿಸಿದ್ದು ಸಂಘದ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಸದಸ್ಯರಿಗೆ ಶೇ.18 ಡಿವಿಡೆಂಟ್ ಘೋಷಿಸಿದರು.

ನಿರ್ದೇಶಕರಾದ ಬಿ. ಸೀತಾರಾಮ ಶೆಟ್ಟಿ ಮಂಗಳೂರು, ಬಾಲಕೃಷ್ಣ ಪೂಂಜ ಮದ್ದಡ್ಕ, ನಾರಾಯಣ ಶೆಟ್ಟಿ ಕುಂಟಿನಿ, ಕೃಷ್ಣ ರೈ ಟಿ. ಸಬರಬೈಲು, ರಘುರಾಮ ಶೆಟ್ಟಿ “ಸಾಧನಾ” ಉಜಿರೆ, ಶ್ರೀಮತಿ ಅಂಬಾ ಬಿ. ಆಳ್ವ ಶ್ರೀರಕ್ಷಾ ನಾಳ, ಪುರಂದರ ಶೆಟ್ಟಿ ಪಾಡ್ಯಾರ್, ಜಯರಾಮ ಭಂಡಾರಿ ಎಂ. ಧರ್ಮಸ್ಥಳ, ಶ್ರೀಮತಿ ಸಾರಿಕಾ ಶೆಟ್ಟಿ ಧರ್ಮಸ್ಥಳ ಹಾಗೂ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ನಿರೂಪಿಸಿದರು. ಸಿಬ್ಬಂದಿಗಳಾದ ರಂಜನ್ ಹಾಗೂ ಶ್ರೀಮತಿ ಸವಿತಾ ಪ್ರಾರ್ಥಿಸಿದರು. ನಿರ್ದೇಶಕರಾದ ರಘುರಾಮ ಶೆಟ್ಟಿ ಸ್ವಾಗತಿಸಿ, ಜಯಂತ್ ಶೆಟ್ಟಿ ಧನ್ಯವಾದವಿತ್ತರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ, ವಾರ್ಷಿಕ ಜಾತ್ರೆ ರಥೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya
error: Content is protected !!