23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಉಜಿರೆ :ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಎಸ್. ಸತೀಶ್ಚಂದ್ರರವರು ಶುಭಾಶಯ ತಿಳಿಸಿದರು.

ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!