September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಸಂಘದ ಆವರಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಅಧ್ಯಕ್ಷ ಸತ್ಯನಾರಾಯಣ ರಾವ್, ಅಂತರಿಕ ಲೆಕ್ಕ ಪರಿಶೋಧಕ ಗೋವಿಂದ ಭಟ್, ಉಪಾಧ್ಯಕ್ಷ ಕೊರಗಪ್ಪ ಗೌಡ, ನಿರ್ದೇಶಕರಾದ ಸುಧೀಂದ್ರ ರಾವ್, ನಾರಾಯಣ ಎನ್, ಸೇಸಪ್ಪ ಗೌಡ, ಮೋನಪ್ಪ ಗೌಡ, ಬಾಬು ಎಮ್.ಕೆ, ಗಿರೀಶ್ ಗೌಡ, ಶ್ರೀಮತಿ ರಮಣಿ ಬಿ, ಶ್ರೀಮತಿ ವಿದ್ಯಾಲತಾ ಉಪಸ್ಥಿತರಿದ್ದರು.

ದ.ಕ ಹಾಲು ಒಕ್ಕೂಟ ಶಿಬಿರ ಕಛೇರಿ ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ.ಕೆ ಮಾಹಿತಿ ನೀಡಿದರು.

ಕಾರ್ಯದರ್ಶಿ ವೆಂಕಟೇಶ್ ಗೌಡ ವರದಿ ನೀಡಿದರು. ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಿಸಲಾಯಿತು. 2023-24 ರಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿದ ಅಧ್ಯಕ್ಷ ಮಿಥುನ್ ಕೆ. ಹಾಗೂ ವನಿತಾ ಎ., ರನ್ನು ಗೌರವಿಸಲಾಯಿತು.

ಉಪಾಧ್ಯಕ್ಷ ಕೊರಗಪ್ಪ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಸುಧೀಂದ್ರ ರಾವ್ ವಂದಿಸಿದರು. ಸಹಾಯಕಿ ಶ್ರೀಮತಿ ಯಶೋಧ ಸಹಕರಿಸಿದರು.

Related posts

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya
error: Content is protected !!