24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕ ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ “ಮನಸು “ಅಂತರಾಳದ ಅವಲೋಕನ ಕಾರ್ಯಕ್ರಮ ಸೆ. 15 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಮತಿ ರಕ್ಷಾ ರಾಘ್ನೇಶ್ ಉದ್ಯಮಿಗಳು ಅನ್ನಪೂರ್ಣ ಮೆಟಲ್ ಬೆಳ್ತಂಗಡಿ ಇವರು ಮಾತನಾಡುತ್ತಾ ಪ್ರಸ್ತುತ ಕಾಲಘಟ್ಟದಲ್ಲಿ ಯುವ ಜನತೆಗೆ ಇಂತಹ ಕಾರ್ಯಕ್ರಮ ಅತ್ಯಂತ ಅಗತ್ಯ ಇದೆ, ಯುವ ವಾಹಿನಿ ಇಂತಹ ಹಲವಾರು ಸಮಾಜಮುಖಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ, ಇನ್ನಷ್ಟು ಸಮಾಜಕ್ಕೆ ಯುವ ಜನತೆಗೆ ಉಪಯೋಗವಾಗುವಂತಹ ಕೆಲಸಗಳು ಘಟಕ ಮತ್ತು ಮಹಿಳಾ ಸಂಚಾಲನಾ ಸಮಿತಿಯಿಂದ ನಡೆಯಲಿ ಎಂದು ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುಮಾರಿ ಹರ್ಷಿತಾ ಎಂ. ವಿ, ಶೈಕ್ಷಣಿಕ ಆಪ್ತ ಸಮಾಲೋಚಕರು ಕೇಂದ್ರೀಯ ವಿದ್ಯಾಲಯ ಉಡುಪಿ, ಇವರು ಮಾಹಿತಿ ನೀಡುತ್ತಾ, ಮಕ್ಕಳು ಮತ್ತು ಮಹಿಳೆಯರ ಮೇಲಾಗಿರುವ ದೌರ್ಜನ್ಯದ ಹಲವಾರು ನೈಜ ಘಟನೆಗಳನ್ನು ತಾನು ನಿರ್ವಹಣೆ ಮಾಡಿರುವ ತನ್ನ ಅನುಭವಗಳನ್ನು ಹಂಚಿಕೊಂಡರು. ಪೋಷಕರು ಮಕ್ಕಳನ್ನು ಅವರ ಮುಂದಿನ ಬದುಕು, ಭವಿಷ್ಯ ಭದ್ರತೆಯಿಂದ ಕೂಡಿರುವಂತೆ ಗಟ್ಟಿಗೊಳಿಸಬೇಕು ತಲೆಯಲ್ಲಿ ಯುಕ್ತಿ, ಮನಸ್ಸಲ್ಲಿ ಭಕ್ತಿ, ತೋಳಿನಲ್ಲಿ ಶಕ್ತಿ ಬೆಳೆಸಿಕೊಳ್ಳುವಂತೆ ಮಕ್ಕಳನ್ನು ನಾವು ಬೆಳೆಸಬೇಕು, ಹಾಗೂ ಸಾಮಾಜಿಕ ಜಾಲತಾಣದ ಒಳಿತು ಕೆಡುಕುಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಸಭಾಧ್ಯಕ್ಷತೆ ವಹಿಸಿದ ಘಟಕದ ಅಧ್ಯಕ್ಷ ಸದಾಶಿವ ಊರ ಮಾತನಾಡುತ್ತಾ ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ಯುವ ಜನತೆ ಜಾಗೃತರಾಗಿ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು. ವೇದಿಕೆಯಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, ಮಹಿಳಾ ಸಂಚಾಲನ ಸಮಿತಿಯ ಸಂಚಾಲಕಿ ವನಿತಾ ಜನಾರ್ಧನ್, ಘಟಕದ ಮಹಿಳಾ ನಿರ್ದೇಶಕಿ ಲೀಲಾವತಿ ವಸಂತ ಪೂಜಾರಿ, ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಜಾತ ಅಣ್ಣಿ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಸಲಹೆಗಾರರಾದ ಸುಧಾಮಣಿ ಸ್ವಾಗತಿಸಿ, ವನಿತಾ ಜನಾರ್ಧನ್ ಧನ್ಯವಾದ ನೀಡಿದರು.

Related posts

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!