March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕ ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ “ಮನಸು “ಅಂತರಾಳದ ಅವಲೋಕನ ಕಾರ್ಯಕ್ರಮ ಸೆ. 15 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಮತಿ ರಕ್ಷಾ ರಾಘ್ನೇಶ್ ಉದ್ಯಮಿಗಳು ಅನ್ನಪೂರ್ಣ ಮೆಟಲ್ ಬೆಳ್ತಂಗಡಿ ಇವರು ಮಾತನಾಡುತ್ತಾ ಪ್ರಸ್ತುತ ಕಾಲಘಟ್ಟದಲ್ಲಿ ಯುವ ಜನತೆಗೆ ಇಂತಹ ಕಾರ್ಯಕ್ರಮ ಅತ್ಯಂತ ಅಗತ್ಯ ಇದೆ, ಯುವ ವಾಹಿನಿ ಇಂತಹ ಹಲವಾರು ಸಮಾಜಮುಖಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ, ಇನ್ನಷ್ಟು ಸಮಾಜಕ್ಕೆ ಯುವ ಜನತೆಗೆ ಉಪಯೋಗವಾಗುವಂತಹ ಕೆಲಸಗಳು ಘಟಕ ಮತ್ತು ಮಹಿಳಾ ಸಂಚಾಲನಾ ಸಮಿತಿಯಿಂದ ನಡೆಯಲಿ ಎಂದು ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕುಮಾರಿ ಹರ್ಷಿತಾ ಎಂ. ವಿ, ಶೈಕ್ಷಣಿಕ ಆಪ್ತ ಸಮಾಲೋಚಕರು ಕೇಂದ್ರೀಯ ವಿದ್ಯಾಲಯ ಉಡುಪಿ, ಇವರು ಮಾಹಿತಿ ನೀಡುತ್ತಾ, ಮಕ್ಕಳು ಮತ್ತು ಮಹಿಳೆಯರ ಮೇಲಾಗಿರುವ ದೌರ್ಜನ್ಯದ ಹಲವಾರು ನೈಜ ಘಟನೆಗಳನ್ನು ತಾನು ನಿರ್ವಹಣೆ ಮಾಡಿರುವ ತನ್ನ ಅನುಭವಗಳನ್ನು ಹಂಚಿಕೊಂಡರು. ಪೋಷಕರು ಮಕ್ಕಳನ್ನು ಅವರ ಮುಂದಿನ ಬದುಕು, ಭವಿಷ್ಯ ಭದ್ರತೆಯಿಂದ ಕೂಡಿರುವಂತೆ ಗಟ್ಟಿಗೊಳಿಸಬೇಕು ತಲೆಯಲ್ಲಿ ಯುಕ್ತಿ, ಮನಸ್ಸಲ್ಲಿ ಭಕ್ತಿ, ತೋಳಿನಲ್ಲಿ ಶಕ್ತಿ ಬೆಳೆಸಿಕೊಳ್ಳುವಂತೆ ಮಕ್ಕಳನ್ನು ನಾವು ಬೆಳೆಸಬೇಕು, ಹಾಗೂ ಸಾಮಾಜಿಕ ಜಾಲತಾಣದ ಒಳಿತು ಕೆಡುಕುಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಸಭಾಧ್ಯಕ್ಷತೆ ವಹಿಸಿದ ಘಟಕದ ಅಧ್ಯಕ್ಷ ಸದಾಶಿವ ಊರ ಮಾತನಾಡುತ್ತಾ ಇಂತಹ ಜಾಗೃತಿ ಕಾರ್ಯಕ್ರಮಗಳಿಂದ ಯುವ ಜನತೆ ಜಾಗೃತರಾಗಿ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು. ವೇದಿಕೆಯಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, ಮಹಿಳಾ ಸಂಚಾಲನ ಸಮಿತಿಯ ಸಂಚಾಲಕಿ ವನಿತಾ ಜನಾರ್ಧನ್, ಘಟಕದ ಮಹಿಳಾ ನಿರ್ದೇಶಕಿ ಲೀಲಾವತಿ ವಸಂತ ಪೂಜಾರಿ, ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಜಾತ ಅಣ್ಣಿ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಸಲಹೆಗಾರರಾದ ಸುಧಾಮಣಿ ಸ್ವಾಗತಿಸಿ, ವನಿತಾ ಜನಾರ್ಧನ್ ಧನ್ಯವಾದ ನೀಡಿದರು.

Related posts

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya
error: Content is protected !!