22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಉಜಿರೆ :ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಎಸ್. ಸತೀಶ್ಚಂದ್ರರವರು ಶುಭಾಶಯ ತಿಳಿಸಿದರು.

ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya
error: Content is protected !!