April 2, 2025
ಗ್ರಾಮಾಂತರ ಸುದ್ದಿ

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಉಜಿರೆ :ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ.ಎಸ್. ಸತೀಶ್ಚಂದ್ರರವರು ಶುಭಾಶಯ ತಿಳಿಸಿದರು.

ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!