September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

ನಿಡ್ಲೆ: ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.16ರಂದು ಸಂಘದ ಆವರಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮಿಥುನ್ ಕೆ. ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಅಧ್ಯಕ್ಷ ಸತ್ಯನಾರಾಯಣ ರಾವ್, ಅಂತರಿಕ ಲೆಕ್ಕ ಪರಿಶೋಧಕ ಗೋವಿಂದ ಭಟ್, ಉಪಾಧ್ಯಕ್ಷ ಕೊರಗಪ್ಪ ಗೌಡ, ನಿರ್ದೇಶಕರಾದ ಸುಧೀಂದ್ರ ರಾವ್, ನಾರಾಯಣ ಎನ್, ಸೇಸಪ್ಪ ಗೌಡ, ಮೋನಪ್ಪ ಗೌಡ, ಬಾಬು ಎಮ್.ಕೆ, ಗಿರೀಶ್ ಗೌಡ, ಶ್ರೀಮತಿ ರಮಣಿ ಬಿ, ಶ್ರೀಮತಿ ವಿದ್ಯಾಲತಾ ಉಪಸ್ಥಿತರಿದ್ದರು.

ದ.ಕ ಹಾಲು ಒಕ್ಕೂಟ ಶಿಬಿರ ಕಛೇರಿ ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ.ಕೆ ಮಾಹಿತಿ ನೀಡಿದರು.

ಕಾರ್ಯದರ್ಶಿ ವೆಂಕಟೇಶ್ ಗೌಡ ವರದಿ ನೀಡಿದರು. ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಿಸಲಾಯಿತು. 2023-24 ರಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿದ ಅಧ್ಯಕ್ಷ ಮಿಥುನ್ ಕೆ. ಹಾಗೂ ವನಿತಾ ಎ., ರನ್ನು ಗೌರವಿಸಲಾಯಿತು.

ಉಪಾಧ್ಯಕ್ಷ ಕೊರಗಪ್ಪ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಸುಧೀಂದ್ರ ರಾವ್ ವಂದಿಸಿದರು. ಸಹಾಯಕಿ ಶ್ರೀಮತಿ ಯಶೋಧ ಸಹಕರಿಸಿದರು.

Related posts

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya
error: Content is protected !!