23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

ಬೆದ್ರಬೆಟ್ಟು: ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಆಚರಣೆಯ ರ‍್ಯಾಲಿ ಇಂದು(ಸೆ.16) ಅರ್ರಿಫಾಯ್ಯಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದಿಂದ ನಡೆಯಿತು.

ಮದ್ರಸಗಳ ಮಕ್ಕಳಿಂದ ಪ್ರವಾದಿ ಗುಣಗಾನದ ಹಾಡುಗಳು, ದಫ್‌ ನೊಂದಿಗೆ ಪ್ರವಾದಿ ಜೀವನದ ಸಂದೇಶ ನೀಡುವುದರ ಮೂಲಕ ಬೆದ್ರಬೆಟ್ಟುವಿನಿಂದ ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾ ವಠಾರದಲ್ಲಿ ಸಾಮೂಹಿಕ ಪ್ರಾರ್ಥನೆ ಮೂಲಕ ಈ ಬಾರಿಯ ಬೃಹತ್ ಮೀಲಾದ್ ರ‍್ಯಾಲಿಯು ಸಾರ್ವಜನಿಕರ ಗಮನ ಸೆಳೆಯಿತು.


ರ‍್ಯಾಲಿಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ಹಂಚಿ, ಪಾನೀಯ ನೀಡಲಾಯಿತು. ಮೀಲಾದ್ ರ‍್ಯಾಲಿಯಲ್ಲಿ ಮಕ್ಕಳಲ್ಲದೆ ಹಿರಿಯರೂ ಪಾಲ್ಗೊಂಡು ಮಿಲಾದುನ್ನಬಿಯ ಸಡಗರ, ಸಂಭ್ರಮಕ್ಕೆ ಸಾಕ್ಷಿಯಾದರು.


ರ‍್ಯಾಲಿಗೂ ಮುನ್ನ ಮಸೀದಿ ವಠಾರದಲ್ಲಿ ರಿಫಾಯ್ಯಾ ಮಸೀದಿ ಅಧ್ಯಕ್ಷರಾದ ಸಲೀಂ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ಮಾಡಿದರು. ಮಸೀದಿ ಧರ್ಮ ಗುರುಗಳು ಮಿಲಾದ್ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿ ಈದ್ ಮಿಲಾದ್ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಆಡಳಿತ ಸಮಿತಿ,ಮಿಲಾದ್ ಸಮಿತಿ,ಯಂಗ್ ಮೆನ್ಸ್ ಸಮೀತಿ, SSF ಬೆದ್ರಬೆಟ್ಟು ಶಾಖೆ ಸಮಿತಿ, ಮದರಸ ಅಧ್ಯಾಪಕರು ಹಾಗೂ ಊರಿನ ಹಿರಿಯರು,ಜಮತಿನ ಸರ್ವ ಮುಸ್ಲಿಮರು ಮತ್ತು ಮದರಸ ವಿದ್ಯಾರ್ಥಿಗಳು ಸೇರಿದ್ದರು.


ಮದರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳು ಮಿಲಾದ್ ಮೌಲಿದ್ ಸಾಮೂಹಿಕ ಪ್ರಾರ್ಥನೆ ಮತ್ತು ಸಭಾ ಕಾರ್ಯಕ್ರಮ ಸೆ.21 ರಂದು ನಡೆಯಲಿದೆ.

Related posts

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!