25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಚ್ಚಿನ ಏ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಮಚ್ಚಿನ ಮತ್ತು ಜ್ಞಾನವಿಕಾಸ ಕೇಂದ್ರ ಕುದ್ರಡ್ಕ, ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ,
ಗುರುನಾರಾಯಣ ಸೇವಾ ಸಂಘ ಮಚ್ಚಿನ, ತುಳು ಶಿವಳ್ಳಿ ಸಭಾ ಮಚ್ಚಿನ ವಲಯ ಗ್ರಾಮ ಪಂಚಾಯತ್ ಮಚ್ಚಿನ ಇವರ
ಸಂಯುಕ್ತ ಆಶ್ರಯದಲ್ಲಿ ಸಮುದಾಯ ಭವನ ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ 15 ರಂದು ನಡೆಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿರವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ||ರಾಧಾಕೃಷ್ಣ ಶೆಟ್ಟಿ ಪ್ರಾಂಶುಪಾಲರು ಶ್ರೀ ಮಹಾವೀರ ಕಾಲೇಜು ಮೂಡಬಿದ್ರೆ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನಾರಾಯಣ ಪೂಜಾರಿ, ಮಚ್ಚಿನ ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ಗೋಪಾಲ ಪೂಜಾರಿ, ತುಳು ಶಿವಳ್ಳಿ ಸಭಾ ಮಚ್ಚಿನ ವಲಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮಡಂತ್ಯಾರು ವಲಯ ವಲಯಧ್ಯಕ್ಷ ಜಯ ಪೂಜಾರಿ, ಎ.ಜೆ.ಆಸ್ಪತ್ರೆ ಡಾ||ಪುನೀತ್ ಮತ್ತು ಸಂಶೋಧನಾ ಕೇಂದ್ರ ಕುಂಟಿಗಾನ ಮಂಗಳೂರು, ಶ್ರೀಮತಿ ಸುಧಾ ಒಕ್ಕೂಟದ ಅಧ್ಯಕ್ಷರು ಮಚ್ಚಿನ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮoಜ ,ಕುದ್ರಡ್ಕ ಸೇವಾಪ್ರತಿನಿಧಿ ಶ್ರೀಮತಿ ನಂದಿನಿ ,ಕುದ್ರಡ್ಕ ಜ್ಞಾನ ವಿಕಾಸ ಸದಸ್ಯರು ಮತ್ತು ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು..

ಮಡಂತ್ಯಾರು ವಲಯದ ಮೇಲ್ವಿಚಾರಕ ವಸಂತ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಸ್ವಾಗತಿಸಿದರು. ಮಚ್ಚಿನ ಸೇವಾಪ್ರತಿನಿಧಿ ಪರಮೇಶ್ವರ್ ಧನ್ಯವಾದವಿತ್ತರು.

Related posts

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!