25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

ಬೆದ್ರಬೆಟ್ಟು: ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ) ಅವರ ಜನ್ಮದಿನದ ಪ್ರಯುಕ್ತ ಈದ್ ಮಿಲಾದ್ ಆಚರಣೆಯ ರ‍್ಯಾಲಿ ಇಂದು(ಸೆ.16) ಅರ್ರಿಫಾಯ್ಯಾ ಮಸೀದಿ ಬೆದ್ರಬೆಟ್ಟುವಿನಲ್ಲಿ ಸಂಭ್ರಮದಿಂದ ನಡೆಯಿತು.

ಮದ್ರಸಗಳ ಮಕ್ಕಳಿಂದ ಪ್ರವಾದಿ ಗುಣಗಾನದ ಹಾಡುಗಳು, ದಫ್‌ ನೊಂದಿಗೆ ಪ್ರವಾದಿ ಜೀವನದ ಸಂದೇಶ ನೀಡುವುದರ ಮೂಲಕ ಬೆದ್ರಬೆಟ್ಟುವಿನಿಂದ ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾ ವಠಾರದಲ್ಲಿ ಸಾಮೂಹಿಕ ಪ್ರಾರ್ಥನೆ ಮೂಲಕ ಈ ಬಾರಿಯ ಬೃಹತ್ ಮೀಲಾದ್ ರ‍್ಯಾಲಿಯು ಸಾರ್ವಜನಿಕರ ಗಮನ ಸೆಳೆಯಿತು.


ರ‍್ಯಾಲಿಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ಹಂಚಿ, ಪಾನೀಯ ನೀಡಲಾಯಿತು. ಮೀಲಾದ್ ರ‍್ಯಾಲಿಯಲ್ಲಿ ಮಕ್ಕಳಲ್ಲದೆ ಹಿರಿಯರೂ ಪಾಲ್ಗೊಂಡು ಮಿಲಾದುನ್ನಬಿಯ ಸಡಗರ, ಸಂಭ್ರಮಕ್ಕೆ ಸಾಕ್ಷಿಯಾದರು.


ರ‍್ಯಾಲಿಗೂ ಮುನ್ನ ಮಸೀದಿ ವಠಾರದಲ್ಲಿ ರಿಫಾಯ್ಯಾ ಮಸೀದಿ ಅಧ್ಯಕ್ಷರಾದ ಸಲೀಂ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ಮಾಡಿದರು. ಮಸೀದಿ ಧರ್ಮ ಗುರುಗಳು ಮಿಲಾದ್ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿ ಈದ್ ಮಿಲಾದ್ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಆಡಳಿತ ಸಮಿತಿ,ಮಿಲಾದ್ ಸಮಿತಿ,ಯಂಗ್ ಮೆನ್ಸ್ ಸಮೀತಿ, SSF ಬೆದ್ರಬೆಟ್ಟು ಶಾಖೆ ಸಮಿತಿ, ಮದರಸ ಅಧ್ಯಾಪಕರು ಹಾಗೂ ಊರಿನ ಹಿರಿಯರು,ಜಮತಿನ ಸರ್ವ ಮುಸ್ಲಿಮರು ಮತ್ತು ಮದರಸ ವಿದ್ಯಾರ್ಥಿಗಳು ಸೇರಿದ್ದರು.


ಮದರಸ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳು ಮಿಲಾದ್ ಮೌಲಿದ್ ಸಾಮೂಹಿಕ ಪ್ರಾರ್ಥನೆ ಮತ್ತು ಸಭಾ ಕಾರ್ಯಕ್ರಮ ಸೆ.21 ರಂದು ನಡೆಯಲಿದೆ.

Related posts

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
error: Content is protected !!