September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಶಿವಪ್ರಸಾದ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಸೆ.16ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಮುರ್ಡೇಶ್ವರ ಆರ್ ಎನ್ ಎಸ್ ಪಾಲಿಟೆಕ್ ನಿಕ್ ವಿಭಾಗೀಯ ಮುಖ್ಯಸ್ಥ ಚೇಂಪಿ ದಿನೇಶ್ ಆಚಾರ್ಯ ಧಾರ್ಮಿಕ ಉಪನ್ಯಾಸವನ್ನು ನೀಡಿ, ನಮ್ಮ ಮಕ್ಕಳಿಗೆ ಆಧ್ಯಾತ್ಮದ ಬಗ್ಗೆ ಅಧ್ಯಾಯನ ಮಾಡಿಸುವಂತಹ ಕೆಲಸಗಳಾಗಬೇಕು. ನಮ್ಮ ಸಂಸ್ಕಾರವನ್ನು ಮರೆಯದೆ ಬ್ರಾಹ್ಮಣತ್ವವನ್ನು ಕಾಪಾಡಿಕೊಂಡು ಹೋಗಬೇಕು. ಶಿಲ್ಪಕಲೆಯಿಂದಾಗಿ ಭಾರತ ಇಂದು ಪ್ರಪಂಚದಲ್ಲಿ ಗುರುತಿಸಲ್ಪಟ್ಟಿದೆ ಎಂದರು.

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಸಾಧಕರಿಗೆ ವಿದ್ಯಾರ್ಥಿ ವೇತನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಸಭಾ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉದ್ಯಮಿ ಬಿ.ಕೆ. ಸತೀಶ ಆಚಾರ್ಯ, ಶ್ರೀ ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ತಾಲೂಕು ಘಟಕ ಅಧ್ಯಕ್ಷ ಆನಂದ ಆಚಾರ್ಯ ಮಾಪಲಾಡಿ, ಯುವ ಉದ್ಯಮಿಗಳು ಶಿಲ್ಪಿ ಶಶಿಧರ ಆಚಾರ್ಯ, ಪ್ರಾಧ್ಯಾಪಕ ತಾರಾನಾಥ ಆಚಾರ್ಯ, ಬೆಳ್ತಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಹರಿಪ್ರಸಾದ್ ಆಚಾರ್ಯ, ಶಿವಪ್ರಸಾದ್ ಪುರೋಹಿತರು ಉಪಸ್ಥಿತರಿದ್ದರು.

ವಿಶೇಷ ಕಾರ್ಯಕ್ರಮದ ಅಂಗವಾಗಿ ವಿ ಸ್ಕೂಲ್ ಆಫ್ ಡಾನ್ಸ್ ಕ್ಲಾಸ್ ಉಜಿರೆ ಇವರಿಂದ ನೃತ್ಯ ಕಾರ್ಯಕ್ರಮ ಹಾಗೂ ಆಕರ್ಷಣ ಕಲಾ ತಂಡ ಇವರಿಂದ “ಪಂಡಿನವು ನೆನಪಿಪ್ಪಡ್” ತುಳು ಸಾಮಾಜಿಕ ಸಾಂಸಾರಿಕ ಹಾಸ್ಯಮಯ ನಾಟಕ ನಡೆಯಿತು.

ಶ್ರೀಮತಿ ಲತಾ ಬಾಲಚಂದ್ರ ಆಚಾರ್ಯ ಹಾಗೂ ರುಕ್ಮಯ ಆಚಾರ್ಯ ಕನ್ನಾಜೆ ನಿರೂಪಿಸಿದರು. ಕು. ಜಯಶ್ರೀ ಪ್ರಾರ್ಥಿಸಿದರು. ಸದಾನಂದ ಆಚಾರ್ಯ ಅಳದಂಗಡಿ ಸ್ವಾಗತಿಸಿದರು. ಸೀತಾರಾಮ ಆಚಾರ್ಯ ಅಳದಂಗಡಿ ಧನ್ಯವಾದವಿತ್ತರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!