22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಚ್ಚಿನ ಏ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಡಂತ್ಯಾರು ವಲಯ ಮಚ್ಚಿನ ಮತ್ತು ಜ್ಞಾನವಿಕಾಸ ಕೇಂದ್ರ ಕುದ್ರಡ್ಕ, ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ,
ಗುರುನಾರಾಯಣ ಸೇವಾ ಸಂಘ ಮಚ್ಚಿನ, ತುಳು ಶಿವಳ್ಳಿ ಸಭಾ ಮಚ್ಚಿನ ವಲಯ ಗ್ರಾಮ ಪಂಚಾಯತ್ ಮಚ್ಚಿನ ಇವರ
ಸಂಯುಕ್ತ ಆಶ್ರಯದಲ್ಲಿ ಸಮುದಾಯ ಭವನ ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ 15 ರಂದು ನಡೆಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿರವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ||ರಾಧಾಕೃಷ್ಣ ಶೆಟ್ಟಿ ಪ್ರಾಂಶುಪಾಲರು ಶ್ರೀ ಮಹಾವೀರ ಕಾಲೇಜು ಮೂಡಬಿದ್ರೆ ಇವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ನಾರಾಯಣ ಪೂಜಾರಿ, ಮಚ್ಚಿನ ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ಗೋಪಾಲ ಪೂಜಾರಿ, ತುಳು ಶಿವಳ್ಳಿ ಸಭಾ ಮಚ್ಚಿನ ವಲಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮಡಂತ್ಯಾರು ವಲಯ ವಲಯಧ್ಯಕ್ಷ ಜಯ ಪೂಜಾರಿ, ಎ.ಜೆ.ಆಸ್ಪತ್ರೆ ಡಾ||ಪುನೀತ್ ಮತ್ತು ಸಂಶೋಧನಾ ಕೇಂದ್ರ ಕುಂಟಿಗಾನ ಮಂಗಳೂರು, ಶ್ರೀಮತಿ ಸುಧಾ ಒಕ್ಕೂಟದ ಅಧ್ಯಕ್ಷರು ಮಚ್ಚಿನ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಹರ್ಷ ಬಳ್ಳಮoಜ ,ಕುದ್ರಡ್ಕ ಸೇವಾಪ್ರತಿನಿಧಿ ಶ್ರೀಮತಿ ನಂದಿನಿ ,ಕುದ್ರಡ್ಕ ಜ್ಞಾನ ವಿಕಾಸ ಸದಸ್ಯರು ಮತ್ತು ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು..

ಮಡಂತ್ಯಾರು ವಲಯದ ಮೇಲ್ವಿಚಾರಕ ವಸಂತ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಸ್ವಾಗತಿಸಿದರು. ಮಚ್ಚಿನ ಸೇವಾಪ್ರತಿನಿಧಿ ಪರಮೇಶ್ವರ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಉಜಿರೆ ಎಸ್ ಡಿ ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಆಚರಣೆ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya
error: Content is protected !!