July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಚ್ಛತಾ ಹಿ ಸೇವಾ ಅಭಿಯಾನ ವಿಶೇಷ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಾರಂತ್ ಅವರ ಅಧ್ಯಕ್ಷತೆ ವಹಿಸಿ, ಕರ್ನಾಟಕ ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಬಳಿಕ ಹಸಿರು ಬಾವುಟ ಪ್ರದರ್ಶಿಸಿ ಸ್ವಚ್ಛತಾ ಜಿ ಸೇವಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಜರುಗಿತು.

ಪಿಡಿಒ ಪ್ರಕಾಶ್ ಶೆಟ್ಟಿ ಕಾರ್ಯಕ್ರಮಕ್ಕೆ ಹಾಜರಿದ್ದವರನ್ನು ಸ್ವಾಗತಿಸಿದರು. ತಾಲೂಕು ಸಂಯೋಜಕರಾದ ಜಯಾನಂದ ವಂದಿಸಿದರು.

ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ವರ್ತಕರ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಎಸ್ ಡಿ ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗಳು, ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya
error: Content is protected !!