July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಎಂಬವರು ಮೃತಪಟ್ಟ ಘಟನೆ ಸೆ.17ರಂದು ಬೆಳಗ್ಗೆ, ನಡೆದಿದೆ.

ಬೈದಿಕಜೆ ಎಂಬಲ್ಲಿ ರಬ್ಬರ್ ತೋಟದ ಕಳೆ ತೆರವುಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆ ತೆಗೆಯುವ ಯಂತ್ರಕ್ಕೆ ಸಿಕ್ಕಿದ ಕಬ್ಬಿಣದ ಸರಿಗೆಯ ರಿಂಗ್ ವೇಗವಾಗಿ ಎದೆಗೆ ಬಡಿದು ಆಳವಾದ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ಥಳೀಯರು ಮಾಡಿದರೂ, ದಾರಿಮಧ್ಯೆ ಕೊನೆಯುಸಿರೆಳೆದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಲಲಿತಾ, ಮಕ್ಕಳಾದ ಹರ್ಷಿತ್, ಪ್ರವೀಣ್‌ರನ್ನು ಅಗಲಿದ್ದಾರೆ.

Related posts

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya
error: Content is protected !!