September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯು ಸೆ. 13 ರಂದು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

10ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರಿಗೆ ಗುರುವಂದನೆಯನ್ನು ಮಾಡಿ ಮತ್ತು ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳು ಕವನಗಳ ಮೂಲಕ ಶಿಕ್ಷಕರ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ವಿಭಿನ್ನ ರೀತಿಯ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ಅಧ್ಯಕ್ಷರಾಗಿದ್ದು, ಇದು ನಿಮ್ಮ ಜೀವನಕ್ಕೆ ಅಡಿಪಾಯ ಇನ್ನು ಮುಂದಕ್ಕೂ ನಿಮ್ಮ ಜೀವನ ಉಜ್ವಲವಾಗಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳೇ ಉತ್ತಮ ಅಂಕಗಳನ್ನು ಪಡೆದು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಓಮನ , ಹಿರಿಯ ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ಅಕ್ಷತ, ಕಿರಿಯ ಪ್ರಾಥಮಿಕ ಪವಿತ್ರ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹತ್ತನೇ ತರಗತಿಯ ವಿದ್ಯಾರ್ಥಿ ವರ್ಷಿತ ಮತ್ತು ದ್ವಿತೀಯ ಪಿಯುಸಿಯ ಸಿಂಚನ ಮತ್ತು ಸಮೀಕ್ಷಾ ನಿರೂಪಿಸಿದರು. 10ನೇ ತರಗತಿಯ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!