March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ ಹೇಳಿದರು.

ಅವರು ಸೆ.16 ರಂದು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ನಮ್ಮ ಪ್ರೇರಣಾ ಸೌಹಾರ್ದ ಸಹಕಾರಿ ಸಂಘವು ಎಲ್ಲರ ಸಹಕಾರದಿಂದ ಉತ್ತಮ‌ ಸಾಧನೆ ಮಾಡಿದೆ ಎಂದರು.

ಸಂಘದ ಉಪಾಧ್ಯಕ್ಷ ವಿಲ್ಸನ್ ಜೋರ್ಜ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಟಿ. ಡಿಸೋಜ, ಜಾನ್ ಅರ್ವಿನ್ ಡಿ’ಸೋಜಾ, ಎಲೋಸಿಯಸ್ ಎಸ್.ಲೋಬೊ, ಜಾನ್ ಆಲ್ವಿನ್ ಪಿಂಟೊ, ಮ್ಯಾಕ್ಸಿಂ ಡಿ ಕೋಸ್ಟಾ,ಬೆನಡಿಕ್ಟ್ ವೇಗಸ್, ಕು. ತಿಯೋಫಿಲಾ ಡಿಸೋಜ, ಸ್ಟೆಲ್ಲಾ ಫ್ರಾಂಕ್,ಸೆಲಿನ್ ನೊರೋನಾ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ನಿರ್ದೇಶಕ ಜಾನ್ ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.ಸಭೆಯಲ್ಲಿ ಲಕ್ಕಿ ಕೂಪನ್ ಡ್ರಾ ನಡೆಸಿ,ವಿಜೇತರಿಗೆ ಬಹುಮಾನ ನೀಡಲಾಯಿತು.

Related posts

ಆದರ್ಶನಗರ ಕ್ರಾಸ್ ಬಳಿ ಟ್ಯಾಂಕರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಯೊಂದಿಗೆ ಚಾಲಕನು ಪರಾರಿ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya
error: Content is protected !!