26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ ಹೇಳಿದರು.

ಅವರು ಸೆ.16 ರಂದು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ನಮ್ಮ ಪ್ರೇರಣಾ ಸೌಹಾರ್ದ ಸಹಕಾರಿ ಸಂಘವು ಎಲ್ಲರ ಸಹಕಾರದಿಂದ ಉತ್ತಮ‌ ಸಾಧನೆ ಮಾಡಿದೆ ಎಂದರು.

ಸಂಘದ ಉಪಾಧ್ಯಕ್ಷ ವಿಲ್ಸನ್ ಜೋರ್ಜ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಟಿ. ಡಿಸೋಜ, ಜಾನ್ ಅರ್ವಿನ್ ಡಿ’ಸೋಜಾ, ಎಲೋಸಿಯಸ್ ಎಸ್.ಲೋಬೊ, ಜಾನ್ ಆಲ್ವಿನ್ ಪಿಂಟೊ, ಮ್ಯಾಕ್ಸಿಂ ಡಿ ಕೋಸ್ಟಾ,ಬೆನಡಿಕ್ಟ್ ವೇಗಸ್, ಕು. ತಿಯೋಫಿಲಾ ಡಿಸೋಜ, ಸ್ಟೆಲ್ಲಾ ಫ್ರಾಂಕ್,ಸೆಲಿನ್ ನೊರೋನಾ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ನಿರ್ದೇಶಕ ಜಾನ್ ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.ಸಭೆಯಲ್ಲಿ ಲಕ್ಕಿ ಕೂಪನ್ ಡ್ರಾ ನಡೆಸಿ,ವಿಜೇತರಿಗೆ ಬಹುಮಾನ ನೀಡಲಾಯಿತು.

Related posts

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya
error: Content is protected !!