23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಲಾಯಿಲ: ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯಿಂದ ಪಂದ್ಯಾಟದಲ್ಲಿ ತೊಡಗಿಸಿಕೊಳ್ಳಬೇಕೆಂದು ಜನಪದ ಕಲಾವಿದರಾದ ಉದಯಕುಮಾರ್ ಲಾಯಿಲ ಹೇಳಿದರು.

ಇವರು ಇತ್ತೀಚೆಗೆ ಎ ಎ ಅಕಾಡೆಮಿ ದಾವಣಗೆರೆ ಸಹಯೋಗಗೊಂಡಿರುವ ಪ್ರಸನ್ನ ಪದವಿ ಪೂರ್ವ ಕಾಲೇಜು ಲಾಯಿಲ ಬೆಳ್ತಂಗಡಿ ಇಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೆಳ್ತಂಗಡಿ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಎ ಎ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಅಣ್ಣೇಶ್ ಕೆ ಹೆಚ್ ವಹಿಸಿದ್ದರು. ಪ್ರಾಂಶುಪಾಲರಾದ ಕೃಪಾ ಆರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಪ್ರಸನ್ನ ಸಿಬಿಎಸ್ಸಿ ಹೈಸ್ಕೂಲಿನ ಮುಖ್ಯೋಪಾಧ್ಯಾಯರಾದ ಎಸ್ಎನ್ ಭಟ್, ಕ್ರೀಡಾ ತಾಲೂಕು ಕ್ರೀಡಾಕೂಟದ ಸಂಯೋಜಕರಾದ ಡೆನ್ನೀಸ್, ಕ್ರೀಡಾ ತರಬೇತುದಾರರಾದ ಹಕೀಮ್, ಪ್ರಸನ್ನ ಕಾಲೇಜಿನ ಮುಖ್ಯನಿಲಯ ಮೇಲ್ವಿಚಾರಕರಾದ ರದೇಶ್, ಪ್ರಸನ್ನ ಸ್ಕೂಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಶಿವರಾಂ, ಉಪನ್ಯಾಸಕರಾದ ಹರಿಪ್ರಸಾದ್ ಉಪಸ್ಥಿತರಿದರು.

ವಿದ್ಯಾರ್ಥಿ ನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಹೇಮಾವತಿ.ಕೆ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ ಉಪನ್ಯಾಸಕಿ ಗೀತಾ ಧನ್ಯವಾದವಿತ್ತರು. ಉಪನ್ಯಾಸಕಿ ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಧನುಷ್ ಎಮ್ ಎನ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ನಿಲಯ ಮೇಲ್ವಿಚಾರಕರಾದ ಜಯರಾಮ್ ಉಪನ್ಯಾಸಕರಾದ ದೀಕ್ಷಿತ್, ಅಶ್ವಿನಿ, ಲಕ್ಷ್ಮಿ ,ವಿದ್ಯಾ , , ಲಕ್ಷ್ಮಣ್ ಆಕಾಶೆ, ಲತಾಶ್ರೀ, ಕಚೇರಿ ಸಿಬ್ಬಂದಿಗಳಾದ ಸ್ವಾತಿ, ದೀಕ್ಷಾ, ಚೈತ್ರ ಸಹಕರಿಸಿದರು.

Related posts

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!