24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾ ಭವನ ಸಂಘದ ಕಚೇರಿ ಬಳಿ ಜರಗಿತು.

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಎಚ್. ಹುಲಿಮೇರು ಅಧ್ಯಕ್ಷತೆ ವಹಿಸಿದರು. ಹೈನುಗಾರಿಕೆಯ ವಿವಿಧ ಮಾಹಿತಿಯನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟ ಬೆಳ್ತಂಗಡಿಯ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ ತಿಳಿಸಿದರು. ಹಾಲು ಪೂರೈಸುವ ಸದಸ್ಯರುಗಳ ಮಕ್ಕಳಿಗೆ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿ. ಯು. ಸಿ. ಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ಡಾ| ಪೂಜಾ, ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಉಮಾನೊಟ್ಟು, ನಿರ್ದೇಶಕರುಗಳಾದ ಬಾಬು ಪೂಜಾರಿ ಹನ್ನೆರಡು ಕವಲು, ಪ್ರತಾಪ್ ಶೆಟ್ಟಿ ಕುಂಡಾಜೆ, ಸುರೇಶ್ ಪೂಜಾರಿ ಪಾಣಿಮೇರು, ಶಶಿಧರ್ ಶೆಟ್ಟಿ ಹಕ್ಕೇರಿ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಜೋಸೆಫ್ ಹಿಲಾರಿ ನಜರತ್ ಹನ್ನೆರಡು ಕವಲು, ದಿನೇಶ್ ಪೂಜಾರಿ ಹುಲಿಮೇರು, ಕಿರಣ್ ಮಂಜಿಲ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರು ಉಮೇಶ್ ಶೆಟ್ಟಿ ಪಾಲ್ಯ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ವಾರ್ಷಿಕ ವರದಿ ಮಂಡಿಸಿದರು. ಸಂಘದ ಸಿಬ್ಬಂದಿ ಸುರೇಶ್.ಎಚ್.ಧನ್ಯವಾದ ನೀಡಿದರು.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya
error: Content is protected !!