23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾ ಭವನ ಸಂಘದ ಕಚೇರಿ ಬಳಿ ಜರಗಿತು.

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಎಚ್. ಹುಲಿಮೇರು ಅಧ್ಯಕ್ಷತೆ ವಹಿಸಿದರು. ಹೈನುಗಾರಿಕೆಯ ವಿವಿಧ ಮಾಹಿತಿಯನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟ ಬೆಳ್ತಂಗಡಿಯ ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ ತಿಳಿಸಿದರು. ಹಾಲು ಪೂರೈಸುವ ಸದಸ್ಯರುಗಳ ಮಕ್ಕಳಿಗೆ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿ. ಯು. ಸಿ. ಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ದಕ್ಷಿಣ ಕನ್ನಡ ಹಾಲು ಒಕ್ಕೂಟ ನಿ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ಡಾ| ಪೂಜಾ, ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಉಮಾನೊಟ್ಟು, ನಿರ್ದೇಶಕರುಗಳಾದ ಬಾಬು ಪೂಜಾರಿ ಹನ್ನೆರಡು ಕವಲು, ಪ್ರತಾಪ್ ಶೆಟ್ಟಿ ಕುಂಡಾಜೆ, ಸುರೇಶ್ ಪೂಜಾರಿ ಪಾಣಿಮೇರು, ಶಶಿಧರ್ ಶೆಟ್ಟಿ ಹಕ್ಕೇರಿ, ಸುಮಿತ್ರ ಶೆಟ್ಟಿ ಹೊಕ್ಕಾಡಿಗೋಳಿ, ಜೋಸೆಫ್ ಹಿಲಾರಿ ನಜರತ್ ಹನ್ನೆರಡು ಕವಲು, ದಿನೇಶ್ ಪೂಜಾರಿ ಹುಲಿಮೇರು, ಕಿರಣ್ ಮಂಜಿಲ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರು ಉಮೇಶ್ ಶೆಟ್ಟಿ ಪಾಲ್ಯ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ವಾರ್ಷಿಕ ವರದಿ ಮಂಡಿಸಿದರು. ಸಂಘದ ಸಿಬ್ಬಂದಿ ಸುರೇಶ್.ಎಚ್.ಧನ್ಯವಾದ ನೀಡಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya
error: Content is protected !!