29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಚ್ಛತಾ ಹಿ ಸೇವಾ ಅಭಿಯಾನ ವಿಶೇಷ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾ ಕಾರಂತ್ ಅವರ ಅಧ್ಯಕ್ಷತೆ ವಹಿಸಿ, ಕರ್ನಾಟಕ ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಬಳಿಕ ಹಸಿರು ಬಾವುಟ ಪ್ರದರ್ಶಿಸಿ ಸ್ವಚ್ಛತಾ ಜಿ ಸೇವಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ, ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಜರುಗಿತು.

ಪಿಡಿಒ ಪ್ರಕಾಶ್ ಶೆಟ್ಟಿ ಕಾರ್ಯಕ್ರಮಕ್ಕೆ ಹಾಜರಿದ್ದವರನ್ನು ಸ್ವಾಗತಿಸಿದರು. ತಾಲೂಕು ಸಂಯೋಜಕರಾದ ಜಯಾನಂದ ವಂದಿಸಿದರು.

ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ವರ್ತಕರ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳು, ಎಸ್ ಡಿ ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗಳು, ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!