24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಎಂಬವರು ಮೃತಪಟ್ಟ ಘಟನೆ ಸೆ.17ರಂದು ಬೆಳಗ್ಗೆ, ನಡೆದಿದೆ.

ಬೈದಿಕಜೆ ಎಂಬಲ್ಲಿ ರಬ್ಬರ್ ತೋಟದ ಕಳೆ ತೆರವುಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆ ತೆಗೆಯುವ ಯಂತ್ರಕ್ಕೆ ಸಿಕ್ಕಿದ ಕಬ್ಬಿಣದ ಸರಿಗೆಯ ರಿಂಗ್ ವೇಗವಾಗಿ ಎದೆಗೆ ಬಡಿದು ಆಳವಾದ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ಥಳೀಯರು ಮಾಡಿದರೂ, ದಾರಿಮಧ್ಯೆ ಕೊನೆಯುಸಿರೆಳೆದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಲಲಿತಾ, ಮಕ್ಕಳಾದ ಹರ್ಷಿತ್, ಪ್ರವೀಣ್‌ರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya
error: Content is protected !!