22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

ಕಾಯರ್ತಡ್ಕ: ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಹಾರಿತ್ತಕಜೆ ನಿವಾಸಿ ಕೊರಗಪ್ಪ ಗೌಡ (56) ಎಂಬವರು ಮೃತಪಟ್ಟ ಘಟನೆ ಸೆ.17ರಂದು ಬೆಳಗ್ಗೆ, ನಡೆದಿದೆ.

ಬೈದಿಕಜೆ ಎಂಬಲ್ಲಿ ರಬ್ಬರ್ ತೋಟದ ಕಳೆ ತೆರವುಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆ ತೆಗೆಯುವ ಯಂತ್ರಕ್ಕೆ ಸಿಕ್ಕಿದ ಕಬ್ಬಿಣದ ಸರಿಗೆಯ ರಿಂಗ್ ವೇಗವಾಗಿ ಎದೆಗೆ ಬಡಿದು ಆಳವಾದ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಸ್ಥಳೀಯರು ಮಾಡಿದರೂ, ದಾರಿಮಧ್ಯೆ ಕೊನೆಯುಸಿರೆಳೆದರು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಪತ್ನಿ ಲಲಿತಾ, ಮಕ್ಕಳಾದ ಹರ್ಷಿತ್, ಪ್ರವೀಣ್‌ರನ್ನು ಅಗಲಿದ್ದಾರೆ.

Related posts

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!