30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಸೆ. 17ರಂದು ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಲ್ಪಕಲೆ ಹಾಗೂ ಕರಕುಶಲತೆಗಳನ್ನು ಒಳಗೊಂಡಿರುವ ಎಲ್ಲಾ ಬಂಧುಗಳನ್ನು ಒಟ್ಟು ಸೇರಿಸಬೇಕು ಎಂಬ ಚಿಂತನೆಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಯವರು ವಿಶ್ವಕರ್ಮರ ಹೆಸರಿನಲ್ಲಿ ಉತ್ತಮವಾದ ಯೋಜನೆಯನ್ನು ಈ ದೇಶಕ್ಕೆ ಅನುಷ್ಠಾನ ಗೊಳಿಸುವ ಮೂಲಕ ಸಮಾಜದ ಎಲ್ಲಾ ಬಂಧುಗಳಿಗೆ ಒಳ್ಳೆಯ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ನೂತನ ವಿಶ್ವಕರ್ಮ ಸಭಾಭವನದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ನಿಧಿಯಿಂದ ಸಹಕಾರವನ್ನು ಕೊಡುತ್ತೇನೆ ಎಂದರು.

ಕೇಳದ ಪೇಟೆ ಸ.ಹಿ. ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರಶಾಂತ್ ಎ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪ ತಹಸೀಲ್ದಾರ್ ರವಿಕುಮಾರ್ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾ ಸ್ವಾಗತಿಸಿದರು. ಶ್ರೀಮತಿ ಹೇಮಲತಾ ನಿರೂಪಿಸಿ, ಧನ್ಯವಾದವಿತ್ತರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!