22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಸೆ. 17ರಂದು ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಲ್ಪಕಲೆ ಹಾಗೂ ಕರಕುಶಲತೆಗಳನ್ನು ಒಳಗೊಂಡಿರುವ ಎಲ್ಲಾ ಬಂಧುಗಳನ್ನು ಒಟ್ಟು ಸೇರಿಸಬೇಕು ಎಂಬ ಚಿಂತನೆಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಯವರು ವಿಶ್ವಕರ್ಮರ ಹೆಸರಿನಲ್ಲಿ ಉತ್ತಮವಾದ ಯೋಜನೆಯನ್ನು ಈ ದೇಶಕ್ಕೆ ಅನುಷ್ಠಾನ ಗೊಳಿಸುವ ಮೂಲಕ ಸಮಾಜದ ಎಲ್ಲಾ ಬಂಧುಗಳಿಗೆ ಒಳ್ಳೆಯ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ನೂತನ ವಿಶ್ವಕರ್ಮ ಸಭಾಭವನದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ನಿಧಿಯಿಂದ ಸಹಕಾರವನ್ನು ಕೊಡುತ್ತೇನೆ ಎಂದರು.

ಕೇಳದ ಪೇಟೆ ಸ.ಹಿ. ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರಶಾಂತ್ ಎ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪ ತಹಸೀಲ್ದಾರ್ ರವಿಕುಮಾರ್ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾ ಸ್ವಾಗತಿಸಿದರು. ಶ್ರೀಮತಿ ಹೇಮಲತಾ ನಿರೂಪಿಸಿ, ಧನ್ಯವಾದವಿತ್ತರು.

Related posts

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!