July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ ಹೇಳಿದರು.

ಅವರು ಸೆ.16 ರಂದು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ನಮ್ಮ ಪ್ರೇರಣಾ ಸೌಹಾರ್ದ ಸಹಕಾರಿ ಸಂಘವು ಎಲ್ಲರ ಸಹಕಾರದಿಂದ ಉತ್ತಮ‌ ಸಾಧನೆ ಮಾಡಿದೆ ಎಂದರು.

ಸಂಘದ ಉಪಾಧ್ಯಕ್ಷ ವಿಲ್ಸನ್ ಜೋರ್ಜ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಟಿ. ಡಿಸೋಜ, ಜಾನ್ ಅರ್ವಿನ್ ಡಿ’ಸೋಜಾ, ಎಲೋಸಿಯಸ್ ಎಸ್.ಲೋಬೊ, ಜಾನ್ ಆಲ್ವಿನ್ ಪಿಂಟೊ, ಮ್ಯಾಕ್ಸಿಂ ಡಿ ಕೋಸ್ಟಾ,ಬೆನಡಿಕ್ಟ್ ವೇಗಸ್, ಕು. ತಿಯೋಫಿಲಾ ಡಿಸೋಜ, ಸ್ಟೆಲ್ಲಾ ಫ್ರಾಂಕ್,ಸೆಲಿನ್ ನೊರೋನಾ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ನಿರ್ದೇಶಕ ಜಾನ್ ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.ಸಭೆಯಲ್ಲಿ ಲಕ್ಕಿ ಕೂಪನ್ ಡ್ರಾ ನಡೆಸಿ,ವಿಜೇತರಿಗೆ ಬಹುಮಾನ ನೀಡಲಾಯಿತು.

Related posts

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya
error: Content is protected !!