ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

ಬೆಳ್ತಂಗಡಿ: ವರದಿ ಸಾಲಿನಲ್ಲಿ ಸಂಘವು ಒಟ್ಟು 679 ಸದಸ್ಯರನ್ನು ಹೊಂದಿದ್ದು,ರೂ. 17,43,500 ಪಾಲು ಬಂಡವಾಳ ಹೊಂದಿದೆ. ರೂ.5.97ಕೋಟಿ ಠೇವಣಿಯೊಂದಿಗೆ ರೂ.25 ಕೋಟಿ ವ್ಯವಹಾರ ನಡೆಸಿದೆ. ಸದಸ್ಯರಿಗೆ ಶೇ.13 ಡಿವಿಡೆಂಡ್ ನೀಡಲು ನಿರ್ಣಯಿಸಲಾಗಿದೆ ಎಂದು ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ ಹೇಳಿದರು.

ಅವರು ಸೆ.16 ರಂದು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಳೆದ ಎಂಟು ವರ್ಷಗಳಿಂದ ನಮ್ಮ ಪ್ರೇರಣಾ ಸೌಹಾರ್ದ ಸಹಕಾರಿ ಸಂಘವು ಎಲ್ಲರ ಸಹಕಾರದಿಂದ ಉತ್ತಮ‌ ಸಾಧನೆ ಮಾಡಿದೆ ಎಂದರು.

ಸಂಘದ ಉಪಾಧ್ಯಕ್ಷ ವಿಲ್ಸನ್ ಜೋರ್ಜ್ ಗೊನ್ಸಾಲ್ವಿಸ್, ನಿರ್ದೇಶಕರಾದ ವಿನ್ಸೆಂಟ್ ಟಿ. ಡಿಸೋಜ, ಜಾನ್ ಅರ್ವಿನ್ ಡಿ’ಸೋಜಾ, ಎಲೋಸಿಯಸ್ ಎಸ್.ಲೋಬೊ, ಜಾನ್ ಆಲ್ವಿನ್ ಪಿಂಟೊ, ಮ್ಯಾಕ್ಸಿಂ ಡಿ ಕೋಸ್ಟಾ,ಬೆನಡಿಕ್ಟ್ ವೇಗಸ್, ಕು. ತಿಯೋಫಿಲಾ ಡಿಸೋಜ, ಸ್ಟೆಲ್ಲಾ ಫ್ರಾಂಕ್,ಸೆಲಿನ್ ನೊರೋನಾ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಐರಿನ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ನಿರ್ದೇಶಕ ಜಾನ್ ಅರ್ವಿನ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.ಸಭೆಯಲ್ಲಿ ಲಕ್ಕಿ ಕೂಪನ್ ಡ್ರಾ ನಡೆಸಿ,ವಿಜೇತರಿಗೆ ಬಹುಮಾನ ನೀಡಲಾಯಿತು.

Related posts

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ತೋಟತ್ತಾಡಿ: ಕೃಷಿಕ ದುಗ್ಗಪ್ಪ ಗೌಡ ನಿಧನ

Suddi Udaya
error: Content is protected !!