September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

ರೆಖ್ಯ: ಮಂಗಳೂರು ಕ್ಷೇತ್ರದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟರವರು ಸೆ.17 ರಂದು ರೆಖ್ಯಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಎಂಜಿರಕ್ಕೆ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಸಂಸದರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಎಂಜಿರದಲ್ಲಿ ಸರ್ವಿಸ್ ರಸ್ತೆಯ ಕಾಮಗಾರಿಯ ಪರಿಶೀಲನೆಯನ್ನು ನಡೆಸಿದರು. ನಂತರ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಮಳೆಯಿಂದಾಗಿ ಹಾನಿಯಾದ ದೇವಸ್ಥಾನವನ್ನು ಪರಿಶೀಲನೆ ನಡೆಸಿ, ಅನುದಾನವನ್ನು ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು.

ಈ ವೇಳೆ ಸಂಸದರು ಹಾಗೂ ಶಾಸಕ ಹರೀಶ್ ಪೂಂಜರವರನ್ನು ಗುಡ್ರಾದಿ ಹಾಗೂ ಕೊಲಾರು ದೇವಸ್ಥಾನದ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಕೊಲಾರು ದೇವಸ್ಥಾನದ ಅನುವಂಶಿಕ ಮೊಕ್ತೇಸರ ರಾಮಯ್ಯ ಗೌಡ ಹಾಗೂ ಗ್ರಾಮಸ್ಥರು ಸನ್ಮಾನಿಸಿದರು. ನಂತರ ಗ್ರಾಮಸ್ಥರು 94ಸಿ ಬಗ್ಗೆ ಮನವಿಯನ್ನು ಸಂಸದರಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ನವೀನ್ ರೆಖ್ಯ, ಬಜರಂಗದಳ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಬೇಬಿ ಕಿರಣ್, ಬಿಜೆಪಿ ಗ್ರಾಮ ಸಮಿತಿ ಸದಸ್ಯರು , ಪದಾಧಿಕಾರಿಗಳು , ಕಾರ್ಯಕರ್ತರು , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ನಾಲ್ಕನೇ ಬಾರಿಗೆ ಪೆಟ್ರೋಲ್ ಡೀಸೆಲ್ ದರ ಏರಿಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!