22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಕೊಡಿಯಾಲಬೈಲು ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಮಾರ್ಗದರ್ಶಿ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.


ಹಿರಿಯ ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ಎಸ್ ರವರು ಪ್ರಾಸ್ತಾವಿಕ ಮಾತನಾಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಿದ್ಯಾಶ್ರೀ. ಜಿ, ಶ್ರೀಮತಿ ಈಶ್ವರಿಯವರು ಅನುದಾನದ ಬಿಡುಗಡೆ, ಖರ್ಚಿನ ಪಟ್ಟಿಯನ್ನು ಸಭೆಗೆ ಮಂಡಿಸಿದರು.
ಸಭೆಯಲ್ಲಿ ಶಾಲಾ ಅನುದಾನದ, ಮೂಲಭೂತ ಸೌಕರ್ಯಗಳಾದ ಕಟ್ಟಡ ದುರಸ್ತಿ, ಶಿಕ್ಷಕರ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.


ಮಾರ್ಗದರ್ಶಿ ಅಧಿಕಾರಿ ಹೇಮಚಂದ್ರ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಗ್ರಾ. ಪಂ ಅಧ್ಯಕ್ಷರು ಶ್ರೀಮತಿ ರತ್ನಾವತಿ, ಸಿ.ಆರ್.ಪಿ ಶಿಕ್ಷಣ ಇಲಾಖೆ ಪ್ರಶಾಂತ್ ಪೂಜಾರಿ, ಶಾಲಾ ಎಸ್.ಡಿ,.ಎಂ.ಸಿ ಅಧ್ಯಕ್ಷರು ರಾಘವೇಂದ್ರ ಪಟವರ್ಧನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಫಿಲೋಮಿನಾ, ಶಾಲಾ ನಾಯಕ ಹಂಶಿತ್, ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಭೆಯು ನಾಡಗೀತೆಯೊಂದಿಗೆ ಸಭೆ ಪ್ರಾರಂಭವಾಗಿ ಶಾಲಾ ಮುಖ್ಯ ಶಿಕ್ಷಕಿಯವರು ಸ್ವಾಗತಿಸಿ, ವಂದಿಸಿದರು.

Related posts

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya
error: Content is protected !!