25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಕೊಡಿಯಾಲಬೈಲು ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಮಾರ್ಗದರ್ಶಿ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.


ಹಿರಿಯ ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ಎಸ್ ರವರು ಪ್ರಾಸ್ತಾವಿಕ ಮಾತನಾಡಿದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ವಿದ್ಯಾಶ್ರೀ. ಜಿ, ಶ್ರೀಮತಿ ಈಶ್ವರಿಯವರು ಅನುದಾನದ ಬಿಡುಗಡೆ, ಖರ್ಚಿನ ಪಟ್ಟಿಯನ್ನು ಸಭೆಗೆ ಮಂಡಿಸಿದರು.
ಸಭೆಯಲ್ಲಿ ಶಾಲಾ ಅನುದಾನದ, ಮೂಲಭೂತ ಸೌಕರ್ಯಗಳಾದ ಕಟ್ಟಡ ದುರಸ್ತಿ, ಶಿಕ್ಷಕರ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.


ಮಾರ್ಗದರ್ಶಿ ಅಧಿಕಾರಿ ಹೇಮಚಂದ್ರ, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಗ್ರಾ. ಪಂ ಅಧ್ಯಕ್ಷರು ಶ್ರೀಮತಿ ರತ್ನಾವತಿ, ಸಿ.ಆರ್.ಪಿ ಶಿಕ್ಷಣ ಇಲಾಖೆ ಪ್ರಶಾಂತ್ ಪೂಜಾರಿ, ಶಾಲಾ ಎಸ್.ಡಿ,.ಎಂ.ಸಿ ಅಧ್ಯಕ್ಷರು ರಾಘವೇಂದ್ರ ಪಟವರ್ಧನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಫಿಲೋಮಿನಾ, ಶಾಲಾ ನಾಯಕ ಹಂಶಿತ್, ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಭೆಯು ನಾಡಗೀತೆಯೊಂದಿಗೆ ಸಭೆ ಪ್ರಾರಂಭವಾಗಿ ಶಾಲಾ ಮುಖ್ಯ ಶಿಕ್ಷಕಿಯವರು ಸ್ವಾಗತಿಸಿ, ವಂದಿಸಿದರು.

Related posts

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya
error: Content is protected !!