23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

ಉಜಿರೆ : ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರೂ. 30 ಲಕ್ಷ ಮೌಲ್ಯದ 2 ಬಿಪಿಎಲ್ ಲೋವೆನ್‌ಸ್ಪೈನ್ ಎಲಿಸಾ-600 ವೆಂಟಿಲೇಟರ್‌ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.


ಡಿ. ಹರ್ಷೇಂದ್ರ ಕುಮಾರ್ ಅವರು ಹೊಸ ತಂತ್ರಜ್ಞಾನದ 2 ಐಸಿಯು ವೆಂಟಿಲೇಟರ್‌ಗಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರತಿಯೊಂದು ಸಂಸ್ಥೆಗಳು ಕೂಡ ಸೇವೆಯ ಉದ್ದೇಶದಿಂದ ನಡೆಸಲ್ಪಡುತ್ತದೆ. ಖರ್ಚು ಬಗ್ಗೆ ಚಿಂತಿಸದೆ ಜನತೆಗೆ ಉತ್ತಮ ಸೇವೆ ನೀಡುವ ಗುರಿಯೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದೇ ಉದ್ದೇಶದಿಂದ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೈದ್ಯಕೀಯ ಸಲಕರಣೆಗಳನ್ನು ಒದಗಿಸಲಾಗಿದೆ. ಇದರಿಂದಾಗಿ ಸುಧಾರಿತ ವೈದ್ಯಕೀಯ ಸೇವೆ ನೀಡಲು ಸಹಕಾರಿಯಾಗಿದೆ. ಹಾಗಾಗಿ ದಿನೇ-ದಿನ ಈ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚೆಗೆ ಈ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳು ಕೂಡ ಈ ಆಸ್ಪತ್ರೆಯ ಮೇಲೆ ಗ್ರಾಮೀಣ ಜನತೆಯಲ್ಲಿ ಭರವಸೆ ಹೆಚ್ಚಿಸಿದೆ. ಈ ಆಸ್ಪತ್ರೆ ಅನೇಕ ಮಂದಿಗೆ ಉದ್ಯೋಗದ ಅವಕಾಶ ನೀಡಿ ಅನೇಕ ಕುಟುಂಬಗಳು ನೆಮ್ಮದಿಗೆ ಕಾರಣವಾಗಿದೆ. ಇತರ ಅನೇಕರಿಗೆ ಪರೋಕ್ಷ ರೀತಿಯಲ್ಲಿ ವಿವಿಧ ಅವಕಾಶ ಒದಗಿಸುವ ಮೂಲಕ ಪ್ರಯೋಜನಕಾರಿಯಾಗಿದೆ ಎಂದರು.


9 ಹಾಸಿಗೆಗಳ ಸುಸಜ್ಜಿತ ಐಸಿಯು ಹೊಂದಿರುವ ಈ ಆಸ್ಪತ್ರೆಯು ಈಗಾಗಲೇ 6 ವೆಂಟಿಲೇಟರ್‌ಗಳನ್ನು ಹೊಂದಿದ್ದು, ಈಗ ಒಟ್ಟು 8 ವೆಂಟಿಲೇಟರ್‌ಗಳಿವೆ. ಹೃದಯಾಘಾತ, ಸ್ಟ್ರೋಕ್, ಉಸಿರಾಟದ ಸಮಸ್ಯೆ ಮುಂತಾದ ತುರ್ತು ಸಂದರ್ಭದಲ್ಲಿ ಈ ಅತ್ಯಾಧುನಿಕ ವೆಂಟಿಲೇಟರ್‌ಗಳು ಬಹಳ ಉಪಯುಕ್ತವಾಗಲಿದೆ. ಇದು ಉತ್ತಮ ಗುಣಮಟ್ಟದ ಉಸಿರಾಟವನ್ನು ಒದಗಿಸುತ್ತದೆ. ಇದರಲ್ಲಿ ಅಳವಡಿಸಿರುವ ಪ್ಯಾರಾಮೀಟರ್ ಹಾಗೂ ರೋಗಿಯಿಂದ ಸಂಪರ್ಕ ಕಳೆದುಕೊಂಡಾಗ ಎಚ್ಚರಿಸುವ ಸೈರನ್ ಹೊಂದಿದ್ದು, ರೋಗಿಗೆ ಉಸಿರಾಟದಲ್ಲಿ ವ್ಯತ್ಯವಾಗದಂತೆ ನಿಗಾವಹಿಸುತ್ತದೆ. ಹೊಸ ತಂತ್ರಜ್ಞಾನ ಹೊಂದಿರುವ ಈ ವೆಂಟಿಲೇಟರ್ ವಯಸ್ಕರು, ಮಕ್ಕಳು ಮತ್ತು ನವಜಾತ ಶಿಶುಗಳಿಗೆ ಹೊಂದಾಣಿಕೆಯಾಗಬಲ್ಲದು. ಈ ವೆಂಟಿಲೇಟರ್ ಪೋರ್‍ಟೇಬಲ್ ಆಗಿದೆ. ಅಗತ್ಯ ಬಿದ್ದಾಗ ಆಂಬ್ಯುಲೆನ್ಸ್‌ಗಳಲ್ಲಿಯೂ ಅಳವಡಿಸಲು ಸಾಧ್ಯವಿದೆ. ಮಂಗಳೂರು ಬಳಿಕ ಈ ಅತ್ಯಾಧುನಿಕ ವೆಂಟಿಲೇಟರ್ ಹೊಂದಿರುವ ಏಕೈಕ ಆಸ್ಪತ್ರೆ ಇದಾಗಿದೆ.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಪಿ, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್, ಇಲ್ಲಿನ ವೈದ್ಯರು, ದಾದಿಯರು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya
error: Content is protected !!