25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

ಉಜಿರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಂಗಳೂರಿನಿಂದ ಚಾಮರಾಜ ನಗರದ ವರೆಗೆ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪುತ್ತೂರಿನ ಮಾಣಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ , ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್ ಕ್ರಾಸ್ ಇವುಗಳ ಸ್ವಯಂ ಸೇವಕರು ಬೃಹತ್ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ ಸಾರುವ ಘೋಷಣೆಗಳನ್ನು ಹೇಳಿದರು. ಸಂವಿಧಾನದ ಪೀಠಿಕಾ ಭಾಗವನ್ನು ಉದ್ಘೋಷಿಸಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ , ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿ ಅಂಕಿತಾ , ಜೂನಿಯರ್ ರೆಡ್ ಕ್ರಾಸ್ ಅಧಿಕಾರಿಗಳಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು.

Related posts

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಮೂಡುಕೋಡಿ ನಿವಾಸಿ ಜಿನ್ನಮ್ಮ ನಿಧನ

Suddi Udaya
error: Content is protected !!