23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಸೆ. 17ರಂದು ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಲ್ಪಕಲೆ ಹಾಗೂ ಕರಕುಶಲತೆಗಳನ್ನು ಒಳಗೊಂಡಿರುವ ಎಲ್ಲಾ ಬಂಧುಗಳನ್ನು ಒಟ್ಟು ಸೇರಿಸಬೇಕು ಎಂಬ ಚಿಂತನೆಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಯವರು ವಿಶ್ವಕರ್ಮರ ಹೆಸರಿನಲ್ಲಿ ಉತ್ತಮವಾದ ಯೋಜನೆಯನ್ನು ಈ ದೇಶಕ್ಕೆ ಅನುಷ್ಠಾನ ಗೊಳಿಸುವ ಮೂಲಕ ಸಮಾಜದ ಎಲ್ಲಾ ಬಂಧುಗಳಿಗೆ ಒಳ್ಳೆಯ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ನೂತನ ವಿಶ್ವಕರ್ಮ ಸಭಾಭವನದ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ನಿಧಿಯಿಂದ ಸಹಕಾರವನ್ನು ಕೊಡುತ್ತೇನೆ ಎಂದರು.

ಕೇಳದ ಪೇಟೆ ಸ.ಹಿ. ಪ್ರಾಥಮಿಕ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರಶಾಂತ್ ಎ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಉಪ ತಹಸೀಲ್ದಾರ್ ರವಿಕುಮಾರ್ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾ ಸ್ವಾಗತಿಸಿದರು. ಶ್ರೀಮತಿ ಹೇಮಲತಾ ನಿರೂಪಿಸಿ, ಧನ್ಯವಾದವಿತ್ತರು.

Related posts

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya
error: Content is protected !!